Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

5 ಕೋಟಿ ಹಣ ವಾಪಾಸ್ ಮಾಡಿದ ರಾಹುಲ್ ದ್ರಾವಿಡ್ : ಸಮಾನತೆಯ ಭಾವವೇ ಇದಕ್ಕೆ ಕಾರಣ..!

---Advertisement---

ಈಗಷ್ಟೇ ಟೀಂ ಇಂಡಿಯಾ ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಭಾರತ ವಿಶ್ವಕಪ್ ಗೆದ್ದ ಖುಷಿಯಲ್ಲಿ ಬಿಸಿಸಿಐ ಕಡೆಯಿಂದ 125 ಕೋಟಿ ಬಹುಮಾನವನ್ನು ಘೋಷಣೆ ಮಾಡಲಾಗಿತ್ತು. ಇದನ್ನು ಆಟಗಾರರಿಗೆ, ಕೋಚ್ ಗಳಿಗೆ ಹಂಚಿಕೆ ಮಾಡಲಾಗಿದೆ. ಅದರಲ್ಲೂ ಟೀಂ ಇಂಡಿಯಾದ ಹೆಡ್ ಕೋಚ್ ಆಗಿದ್ದಂತ ರಾಹುಲ್ ದ್ರಾವಿಡ್ ಅವರಿಗೂ ಐದು ಕೋಟಿ ಬಹುಮಾನವನ್ನು ಘೋಷಣೆ ಮಾಡಲಾಗಿತ್ತು. ಆದರೆ ಆ ಐದು ಕೋಟಿ ಹಣವನ್ನು ರಾಹುಲ್ ದ್ರಾವಿಡ್ ನಿರಾಕರಿಸಿದ್ದಾರೆ.

ಟೀಂ ಇಂಡಿಯಾ ಜೊತೆಗೆ ನಿಂತ 42 ಆಟಗಾರರಿಗೆ ಈ 125 ಕೋಟಿ ಹಣದಲ್ಲಿ ಹಂಚಿಕೆ ಮಾಡಲಾಗಿದೆ. ಅದರಲ್ಲಿ 15 ಆಟಗಾರರಿಗೆ ತಲಾ ಐದು ಕೋಟಿ ಬಹುಮಾನ ನೀಡಲಾಗಿದೆ. ಅದರಲ್ಲಿ ರಾಹುಲ್ ದ್ರಾವಿಡ್ ಕೂಡ ಇದ್ದಾರೆ. ಇನ್ನುಳಿದಂತೆ ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಕೋಚ್ ಸೇರಿದಂತೆ ಇತರೆ ಕೋಚ್ ಗಳಿಗೆ ತಲಾ 2.5 ಕೋಟಿ ಬಹುಮಾನವನ್ನು ಘೋಷಣೆ ಮಾಡಿದೆ. ಆದರೆ ರಾಹುಲ್ ದ್ರಾವಿಡ್ ಈ ಐದು ಕೋಟಿ ಹಣವನ್ನು ತಿರಸ್ಕಾರ ಮಾಡಿದ್ದಾರೆ. ಅದಕ್ಕೂ ಕಾರಣವೊಂದಿದೆ. ಈ ಕಾರಣದಿಂದ ರಾಹುಲ್ ದ್ರಾವಿಡ್ ಮತ್ತೊಮ್ಮೆ ಎಲ್ಲರ‌ಮನಸ್ಸು ಗೆದ್ದಿದ್ದಾರೆ.

ಬೌಲಿಂಗ್, ಬ್ಯಾಟಿಂಗ್, ಕೋಚ್ ಗಳಿಗೆ ತಲಾ 2.5 ಕೋಟಿ ನೀಡುತ್ತಿರುವ ಕಾರಣ ನನಗೂ ಐದು ಕೋಟಿ ಹಣ ಬೇಡ. ಅವರಿಗೆಲ್ಲಾ ನೀಡಿದಂತೆ ಬರೀ ಬಹುಮಾನದ ಹಣವನ್ನಷ್ಟೇ ನೀಡಿ ಎಂದಿದ್ದಾರಂತೆ. ರಾಹುಲ್ ದ್ರಾವಿಡ್ ಅವರ ಮಾತಿಗೆ ಗೌರವ ನೀಡಿ, ಬಿಸಿಸಿಐ ಎರಡೂವರೆ ಕೋಟಿ ಕೊಡಲು ಒಪ್ಪಿದೆ. ಈ ಹಿಂದೆ U-19 ಪಂದ್ಯದ ವೇಳೆಯೂ ಇದೇ ರೀತಿ ನಿರ್ಧಾರ ಮಾಡಿದ್ದರು. ಎಲ್ಲರಿಗೂ 25 ಲಕ್ಷ ನೀಡಿ ರಾಹುಲ್ ದ್ರಾವಿಡ್ ಅವರಿಗೆ 50 ಲಕ್ಷ ನೀಡುವುದಕ್ಕೆ ಬಂದಾಗ ಬಿಸಿಸಿಐ ಬಳಿ 25 ಲಕ್ಷವನ್ನಷ್ಟೇ ಪಡೆದಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment