Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿನ್ನೆ ಬೈಕ್ ನಲ್ಲಿ ಇಂದು BMTC ಬಸ್ ನಲ್ಲಿ ರಾಹುಲ್ ಗಾಂಧಿ ಪ್ರಯಾಣ : ಜನರು ಹೇಳಿದ್ದೇನು ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ರಾಹುಲ್ ಗಾಂಧಿಯಂತು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಭಾರತ್ ಜೋಡೋ ಯಾತ್ರೆ ಮಾಡಿದ್ದಾಯ್ತು, ಈಗ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಓಡಾಡುತ್ತಾ ಇದ್ದಾರೆ. ಅದರಲ್ಲೂ ಜನಸಾಮಾನ್ಯರ ನಡುವೆ ಸಾಮಾನ್ಯರಂತೆ ಎಲ್ಲರ ಜೊತೆಗೂಡುತ್ತಿರುವುದು, ಜನಸಾಮಾನ್ಯರಿಗೆ ಸಂತಸ ತಂದಿದೆ.

ಇಂದು ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹತ್ತಿ ಸಂಚಾರ ನಡೆಸಿದ್ದಾರೆ. ಕನ್ನಿಂಗ್ ಹ್ಯಾಮ್ ರೋಡ್ ನಿಂದ BMTC ಬಸ್ ಹತ್ತಿದ ರಾಹುಲ್ ಗಾಂಧಿ, ಸಹ ಪ್ರಯಾಣಿಕರ ಜೊತೆ ಆತ್ಮೀಯವಾಗಿ ಬೆರೆತಿದ್ದಾರೆ. ಶೇಕ್ ಹ್ಯಾಂಡ್ ಮಾಡಿ, ಸಮಸ್ಯೆಗಳನ್ನು ಕೇಳಿದ್ದಾರೆ. ಚರ್ಚೆ ನಡೆಸಿದ್ದಾರೆ. ಅಲ್ಲಿಯೇ ಖಾಲಿ ಇದ್ದ ಲೇಡಿಸ್ ಸೀಟಿನಲ್ಲಿಯೇ ಅನುಮತಿ ಕೇಳಿ ಕುಳಿತುಕೊಂಡಿದ್ದಾರೆ.

ಜೊತೆಗೆ ತಮ್ಮ ಜೊತೆಗೆ ಇದ್ದ ಬಾಡಿ ಗಾರ್ಡ್ ಗಳಿಗೆ ಸೇರಿ, 20 ಟಿಕೆಟ್ ಕೇಳಿ ಪಡೆದಿದ್ದಾರೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ಫ್ರೀ ಬಸ್ ಪಾಸ್ ನೀಡುತ್ತೇವೆ ಎಂದಿದ್ದಾರೆ. ಹೀಗೆ ಮಾತನಾಡುತ್ತಾ ಮಾತನಾಡುತ್ತ ರಾಹುಲ್ ಗಾಂಧಿ ಸುಮಾರು 6 ಕಿಮೀ ಬಸ್ ನಲ್ಲಿಯೇ ಸಂಚಾರ ಮಾಡಿದ್ದಾರೆ. ಬಳಿಕ ಲಿಂಗರಾಜಪುರ ಬಸ್ ನಿಲ್ದಾಣದಲ್ಲಿ ಇಳಿದಿದ್ದಾರೆ. ರಾಹುಲ್ ಗಾಂದಿಯವರನ್ನು ಕಂಡ ಜನ ಸೆಲ್ಫೀ ತೆಗೆದುಕೊಂಡು, ಶೇಕ್ ಹ್ಯಾಂಡ್ ಮಾಡಿ, ಸಂತಸ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

error: Content is protected !!