Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಸೂರಿಗೆ ಬರಲಿದ್ದಾರೆ ರಾಹುಲ್ ಗಾಂಧಿ : ಡಿಕೆಶಿ ಸಮಸ್ಯೆಗೆ ಸಿಗುತ್ತಾ ಪರಿಹಾರ..?

---Advertisement---

ಮೈಸೂರು: ಸಿದ್ದರಾಮಯ್ಯ ಅವರು ದಾಖಲೆ ಮಾಡಿ ಆಯ್ತು. ಇನ್ನು ಡಿಕೆ ಶಿವಕುಮಾರ್ ಸಿಎಂ ಆಗುವುದಕ್ಕೆ ಇದ್ದಂತ ಅಡ್ಡಗೋಡೆಗಳು ನಿವಾರಣೆ ಆಗಿದ್ದಾವೆ ಎಂಬ ಚರ್ಚೆಗಳು ಶುರುವಾಗಿವೆ. ಡಿಕೆ ಶಿವಕುಮಾರ್ ಅವರು ಕೂಡ ಆ ಪ್ರಯತ್ನದ ಹಾದಿಯಲ್ಲಿಯೇ ಇದ್ದಾರೆ. ಇದರ ಬಗ್ಗೆ ಮಾತನಾಡುವುದಕ್ಕೆ ದೆಹಲಿಗೆ ಕೂಡ ಹೋಗಿ ಬಂದಿದ್ದರು. ಆದರೆ ಹೈಕಮಾಂಡ್ ನಾಯಕರು ಭೇಟಿಗೆ ಸಿಕ್ಕಿರಲಿಲ್ಲ. ಇದೀಗ ನಾಯಕ ರಾಹುಲ್ ಗಾಂಧಿ ಅವರೇ ಮೈಸೂರಿಗೆ ಬರ್ತಿದ್ದಾರೆ. ಅಲ್ಲಿ ಡಿಕೆ ಶಿವಕುಮಾರ್ ಭೇಟಿಯಾಗುವ ಎಲ್ಲಾ ಸಾಧ್ಯತೆಗಳು ಇದಾವೆ.

ರಾಹುಲ್ ಗಾಂಧಿ ಅವರು 15 ನಿಮಿಷಗಳ ಕಾಲ ಮೈಸೂರು ವಿಮಾನ ನಿಲ್ದಾಣದಲ್ಲಿ ಇರಲಿದ್ದಾರೆ. ಇಂದು ಮಧ್ಯಾಹ್ನ 2.20ಕ್ಕೆ ರಾಹುಲ್ ಗಾಂಧಿ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 15 ನಿಮಿಷಗಳ ನಿಲ್ದಾಣದಲ್ಲಿ ಇದ್ದು, ನಂತರ ತಮಿಳುನಾಡಿನ ಗುಡ್ಲುರಿಗೆ ಪ್ರಯಾಣಿಸಲಿದ್ದಾರೆ. ಸಂಜೆ 5.45ಕ್ಕೆ ಹೆಲಿಕಾಪ್ಟರ್ ನಲ್ಲಿ ತಮಿಳುನಾಡಿನಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ರಾಹುಲ್ ಮರಳಲಿದ್ದಾರೆ. ತಮಿಳುನಾಡಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಬರುತ್ತಿದ್ದಾರೆ.

ಈ ವೇಳೆ ಡಿಕೆ ಶಿವಕುಮಾರ್ ಕೂಡ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿ, ಕುಶಲೋಪರಿಯನ್ನು ವಿಚಾರಿಸಲಿದ್ದಾರೆ. ಅದರಲ್ಲೂ ಇಬ್ಬರ ಭೇಟಿ ಮಹತ್ವವಾದದ್ದಾಗಿದೆ. ಸಿಎಂ ಆಗ್ಬೇಕು ಎಂಬ ಆಸೆ ಇರುವ ಡಿಕೆ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ಅವರ ಭೇಟಿ, ಬಹಳ ಮುಖ್ಯವಾಗಿದೆ. ನಿನ್ನೆಯೆಲ್ಲಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದರು. ಇಂದು ರಾಹುಲ್ ಗಾಂಧಿ ಅವರು ತಮಿಳುನಾಡಿಗೆ ತೆರಳುವುದಕ್ಕೂ ಮುನ್ನ ಭೇಟಿಯಾಗಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now