ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಮಾ. 15 : ಇಂದು ಧರ್ಮಗಳಲ್ಲಿ ವಿಷದ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಇಂತಹ ಸಮಯದಲ್ಲಿ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಮಾಡುವ ಮೂಲಕ ಭಾರತಕ್ಕೆ ಮತ್ತಷ್ಟು ಶಕ್ತಿಯನ್ನು ಅವರ ಪಾದಯಾತ್ರೆ ನೀಡಿತು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂಕೆ ತಾಜ್ ಪೀರ್ ಹೇಳಿದರು.
ಪತ್ರಿಕಾ ಭವನದಲ್ಲಿ ರಾಹುಲ್ ಗಾಂಧಿ ವಿಚಾರ ಮಂಚ್ವತಿಯಿಂದ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತಾಡಿದ ಅವರು. ರಾಹುಲ್ ಗಾಂಧಿ ಅವರ ಆಲೋಚನೆಗಳು ಬಹಳಷ್ಟು ಬದಲಾಗಿವೆ. ಅವರು ಐತಿಹಾಸಿಕ ದಾಖಲೆ ಬರೆಯುವಂತ 3500 ಕಿಲೋಮೀಟರ್ ಪಾದಯಾತ್ರೆ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಪಾದಯಾತ್ರೆ ಮಾಡಿದರು.
ಇಂತಹ ಪಾದಯಾತ್ರೆಯ ಸಮಯದಲ್ಲಿ ಅಜ್ಜಿಯ ಸೌತೆಕಾಯಿ ಸ್ವೀಕರಿಸಿದ್ದರು. ಮೊಳಕಾಲ್ಮೂರಿನ ನೀರಿನ ಟ್ಯಾಂಕ್ ಮೇಲೆ ಹತ್ತಿ ರಾಷ್ಟ್ರ ಧ್ವಜ ಹಿಡಿದು ಬಾಲಕರ ಜೊತೆ ಬೆರೆತಿದ್ದನ್ನು ಸ್ಮರಿಸಿದರು.ರಾಹುಲ್ ಗಾಂಧಿ ಮಣಿಪುರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ್ ಜೋಡೋ ನ್ಯಾಯ ಯಾತ್ರೆಯ ಪಾದಯಾತ್ರೆಯನ್ನು ಮಾಡುತ್ತಿದ್ದಾರೆ. ಇದರಿಂದ ಶಾಂತಿ ನೆಲೆಸುವಂತಾಗಿದೆ. ದೇಶದಲ್ಲಿ ಶಾಂತಿ ಸೌಹಾರ್ದತೆಯ ವಾತಾವರಣ ಸೃಷ್ಠಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದರು.
ಇದೇ ಸಮಯದಲ್ಲಿ ಮಾತಾಡಿದ ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಡಿಎನ್ ಮೈಲಾರಪ್ಪ, ಬಿಜೆಪಿಯ ಅನಂತ್ ಕುಮಾರ್ ಹೆಗಡೆ ಅವರ ಮೇಲೆ ಕೇಂದ್ರ ಸರ್ಕಾರ ಕ್ರಮವನ್ನು ಜರುಗಿಸಬೇಕು ಎಂದು ಆಗ್ರಹಿಸಿದರು.
ಸಮಯದಲ್ಲಿ ಕಾಂಗ್ರೆಸ್ ಮುಖಂಡಾದ ಮುದಾಸರ್ ನವಾಜ್, ರೈತ ಮುಖಂಡ ಲಕ್ಷ್ಮಿಕಾಂತ್, ರಾಹುಲ್ ಗಾಂಧಿ ವಿಚಾರ ಮಂಚ್ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಲಿಂಗರಾಜ್, ಬಾಷ ಇತರರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್