ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಕಲ ಸಿದ್ಧತೆಯನ್ನು ನಡೆಸಿದೆ. ಬಿಜೆಪಿಯನ್ನು ಸೋಲಿಸಲೇಬೇಕೆಂದು ವಿಪಕ್ಷಗಳೆಲ್ಲವೂ ಕಾಂಗ್ರೆಸ್ ಜೊತೆಗೆ ಕೈಜೋಡಿಸಿವೆ. ಇದೀಗ ರಾಹುಲ್ ಗಾಂಧಿ ಬಿಜೆಪಿಗೆ ಬಿಗ್ ಸಪ್ರೈಸ್ ಕೊಡುವುದಕ್ಕೆ ರೆಡಿಯಾಗಿದ್ದಾರೆ.
ಖಾಸಗಿ ಕಾರ್ಯಕ್ರಮದ ಸಂವಾದದಲ್ಲಿ ಮಾತನಾಡಿರುವ ರಾಹುಲ್ ಗಾಂಧಿ, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಪ್ರೈಸ್ ಫಲಿತಾಂಶ ಕಾದಿದೆ. ಮುಂಬರುವ ಪಂಚರಾಜ್ಯ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷವೇ ಗೆಲುವು ಸಾಧಿಸಲಿದೆ. ತೆಲಂಗಾಣ, ಮಧ್ಯಪ್ರದೇಶ, ಛತ್ತಿಸ್ ಘಡ, ರಾಜಸ್ಥಾನದಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ.
ಬಿಜೆಪಿ ನಾಯಕರು ಸ್ವಂತ ಬಲದಿಂದ ಅಧಿಕಾಎಕ್ಕೆ ಬರುವುದಿಲ್ಲ. ಹೆದರಿಸಿ, ಅಜಾರುಕತೆಯಿಂದ ಗೆಲುವು ಸಾಧಿಸುತ್ತಿದ್ದಾರೆ. ಕರ್ನಾಟಕದ ಚುನಾವಣೆಯಿಂದ ಕಾಂಗ್ರೆಸ್ ಮುಖ್ಯವಾದ ಪಾಠ ಕಲಿತಿದೆ. 2024ರಲ್ಲಿ ಬಿಜೆಪಿಗೆ ಸರ್ಪೈಸ್ ಸಿಗಲಿದೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












