Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಹುಲ್ ಗಾಂಧಿ ಪ್ರಧಾನಿ ಆಗುವುದು ಖಚಿತ : ಸಲೀಂ ಅಹಮದ್

Facebook
Twitter
Telegram
WhatsApp

ಸುದ್ದಿಒನ್, ಹಿರಿಯೂರು, ಏಪ್ರಿಲ್. 15 :  ದೇಶ ಉಳಿಯಬೇಕೆಂದರೆ, ಅಭಿವೃದ್ಧಿ ಹೊಂದಬೇಕೆಂದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಸಚೇತಕ ಹಾಗೂ ಎಂಎಲ್ಸಿ ಸಲೀಂ ಅಹಮದ್ ಪ್ರತಿಪಾದಿಸಿದರು.

ನಗರದ ನೆಹರೂ ಮೈದಾನದಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ  ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷ ನಿನ್ನೆ ಮೊನ್ನೆ ಹುಟ್ಟಿದ ಪಕ್ಷವಲ್ಲ. ಅದಕ್ಕೆ 150 ವರ್ಷಗಳ ಇತಿಹಾಸವಿದೆ. ತ್ಯಾಗ, ಬಲಿದಾನ, ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿರುವ ಪಕ್ಷ ನಮ್ಮದು. ದೇಶ ಕಂಡಂತಹ ಅಪ್ರತಿಮ ನಾಯಕಿ ಇಂದಿರಾಗಾಂಧಿಯವರು ಹಲವಾರು ಜನಪರ ಯೋಜನೆಗಳನ್ನ ಜಾರಿಗೆ ತಂದಿದ್ದರು. ಅವರು ತಮ್ಮ ಕೊನೆಯ ಭಾಷಣದಲ್ಲಿ ನನ್ನ ರಕ್ತ ಹಾಗೂ ಉಸಿರು ಈ ದೇಶಕ್ಕೆ ಮುಡಿಪು ಎಂದು ಪ್ರಾಣವನ್ನು ಅರ್ಪಿಸಿದ್ದರು. ಇಂತಹ ವಿಚಾರಗಳು ವಿರೋಧಿಗಳಿಗೆ ಅರ್ಥವಾಗುವುದಿಲ್ಲ. ನಿಜವಾದ ರಾಷ್ಟ್ರಭಕ್ತಿ ಏನೆಂಬುದು ಕಾಂಗ್ರೆಸ್ಸಿಗರಿಗೆ ರಕ್ತಗತವಾಗಿ ಬಂದಿದ್ದು, ಬೇರೆಯವರಿಂದ ಕಲಿಯಬೇಕಿಲ್ಲ ಎಂದು ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಗಾಂಧಿ ಕುಟುಂಬವನ್ನು ವೃಥಾ ಟೀಕಿಸುವುದು ಕೆಲವರಿಗೆ ಹವ್ಯಾಸವಾಗಿ ಹೋಗಿದೆ. ಗಾಂಧಿ ಕುಟುಂಬದ ತ್ಯಾಗ, ಬಲಿದಾನ ಏನೆಂಬುದು ದೇಶದ ಜನರಿಗೆ ತಿಳಿದಿದೆ. ಹೀಗಾಗಿ ರಾಹುಲ್ ಗಾಂಧಿ ಪ್ರಧಾನಿ ಆಗುವುದು ಖಚಿತ ಎಂದು ಸಲೀಂ ಅಹಮದ್ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಮಾತನಾಡಿ, ಸುಳ್ಳನ್ನೇ ಪದೇ ಪದೇ ಹೇಳುವ ಮೂಲಕ ಬಿಜೆಪಿ ಜನರನ್ನು ನಂಬಿಸುವ ಕೆಲಸ ಮಾಡುತ್ತದೆ. ಅವರ ಮೋಸ ಹತ್ತು ವರ್ಷಕ್ಕೇ ಅಂತ್ಯವಾಗಬೇಕು. ಸಂವಿಧಾನ ಉಳಿವಿಗೆ ಹೋರಾಡುವ ಕಾಂಗ್ರೆಸ್, ಸಂವಿಧಾನ ಮುಗಿಸಲೇಬೇಕು ಎಂದು ಹಠಕ್ಕೆ ಬಿದ್ದಿರುವ ಬಿಜೆಪಿ ನಡುವಿನ ಹೋರಾಟ ಈ ಚುನಾವಣೆಯಾಗಿದೆ. ಬಡವರು ಹೊಟ್ಟೆ ತುಂಬಾ ಊಟ ಮಾಡೋದನ್ನೂ ಸಹ ಬಿಜೆಪಿ ಸಹಿಸಲ್ಲ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಬಿಜೆಪಿಗರಿಗೆ ತಕ್ಕ ಪಾಠ ಕಲಿಸಿ ಎಂದು ಮನವಿ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಮಾತನಾಡಿ, ತನ್ನ ಮಾತು ಕೇಳದವರನ್ನು ಬ್ಲಾಕ್ ಮೇಲ್ ಮಾಡಿ ಹಿಂಸೆ ಕೊಟ್ಟು ರಾಜಕಾರಣ ಮಾಡುವ ಬಿಜೆಪಿಯನ್ನು ದೇಶದ ಮತದಾರರು ಸೋಲಿಸಬೇಕು. ಗೋವಿಂದ ಕಾರಜೋಳರನ್ನ ಅವರ ಜಿಲ್ಲೆಯ ಜನರೇ ತಿರಸ್ಕರಿಸಿದ್ದಾರೆ. ಮಾಜಿ ಸಿಎಂ  ಕುಮಾರಸ್ವಾಮಿಯವರು ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳುವ ಮೂಲಕ ಮಹಿಳಾ ಸಂಕುಲಕ್ಕೆ ಅವಮಾನಿಸಿದ್ದು, ಎಲ್ಲಾ ಮಹಿಳೆಯರು ಕುಮಾರಸ್ವಾಮಿ ಹೇಳಿಕೆಯನ್ನು ಖಂಡಿಸಬೇಕು ಎಂದು ಕರೆ ನೀಡಿದರು.

ಮಾಜಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಮಾತನಾಡಿದರು. ಸಭೆಯಲ್ಲಿ ಮುಖಂಡರಾದ ಜಿ.ಎಸ್. ಮಂಜುನಾಥ್, ಡಿ.ಟಿ. ಶ್ರೀನಿವಾಸ್, ತಾಜ್ ಪೀರ್, ಎಸ್. ವಿಜಯಕುಮಾರ್,
ಖಾದಿ ರಮೇಶ್, ಈರಲಿಂಗೇಗೌಡ, ಗೀತಾ ನಂದಿನಿ ಗೌಡ, ಸಿ.ಬಿ. ಪಾಪಣ್ಣ, ಆರ್. ನಾಗೇಂದ್ರ ನಾಯ್ಕ್, ಟಿ. ಚಂದ್ರಶೇಖರ್, ಬಿ.ಎಚ್. ಮಂಜುನಾಥ್,  ಶಿವರಂಜಿನಿ ಯಾದವ್, ಚಿತ್ರಜಿತ್ ಯಾದವ್,  ಬಿ.ಎನ್. ಪ್ರಕಾಶ್, ಕಾರೆಹಳ್ಳಿ ಉಲ್ಲಾಸ್, ಕಂದಿಕೆರೆ ಸುರೇಶ್ ಬಾಬು,ಜಿ.ಎಲ್. ಮೂರ್ತಿ, ಖಾಲಿದ್ ಹುಸೇನ್, ಎ. ಮಂಜುನಾಥ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!