ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಎರಡೇ ದಿನ ಬಾಕಿ ಇದೆ. ಭರ್ಜರಿ ಪ್ರಚಾರಕ್ಕೂ ಸಮಯ ಕಡಿಮೆ ಇರುವ ಕಾರಣ ರಾಜಕೀಯ ಪಕ್ಷಗಳು ಸಿಕ್ಕಾಪಟ್ಟೆ ಅಬ್ಬರದ ಪ್ರಚಾರ ನಡೆಸುತ್ತಿವೆ. ಇಂದು ರಾಹುಲ್ ಗಾಂಧಿ ಕೂಡ ನಗರದಾದ್ಯಂತ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಹಮ್ಮಿಕೊಂಡಿದ್ದರು. ಈ ವೇಳೆ ಡೆಲಿವರಿ ಬಾಯ್ ಬಳಿ ರಾಹುಲ್ ಗಾಂಧಿ ಡ್ರಾಪ್ ತೆಗೆದುಕೊಂಡಿರುವ ಘಟನೆ ನಡೆದಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಏರ್ ಲೈನ್ಸ್ ಹೊಟೇಲ್ ನಿಂದ ಶಾಂಘ್ರಿಲಾಗೆ ಹೋಗಬೇಕಿತ್ತು. ಹೊಟೇಲ್ ನಿಂದ ಹೊರ ಬಂದಾಗ ಫುಡ್ ಡೆಲಿವರಿ ಬಾಯ್ ಕಂಡಿದ್ದಾರೆ. ತಕ್ಷಣ ಅವರ ಬಳಿ ಡ್ರಾಪ್ ಕೇಳಿದ್ದಾರೆ. ರಾಹುಲ್ ಗಾಂಧಿ ಅವರನ್ನು ಕಂಡು ಫುಡ್ ಡೆಲಿವರಿ ಬಾಯ್ ಅಂತು ಶಾಕ್ ಆಗಿದ್ದಾನೆ. ಆದರೂ ಅವರು ಗಾಡಿ ಹತ್ತಿದಾಗ ಖುಷಿ ಮತ್ತು ಭಯದಿಂದಾನೇ ಗಾಡಿ ಓಡಿಸಿದ್ದಾನೆ. ರಾಹುಲ್ ಗಾಂಧಿ ಅವರು ಹೆಲ್ಮೆಟ್ ಧರಿಸಿಯೇ ಗಾಡಿ ಮೇಲೆ ಕೂತಿದ್ದಾರೆ.
ಯಾವುದೇ ರೀತಿಯ ಭದ್ರತೆ ಇಲ್ಲದೆ ಬೆಂಗಳೂರಿನ ರಸ್ತೆಯ ಇಕ್ಕೆಲಗಳಲ್ಲಿ ರಾಹುಲ್ ಗಾಂಧಿ ಸಂಚರಿಸಿದರು. ಜಾಲಿ ರೈಡ್ ನಲ್ಲಿ ರಾಹುಲ್ ಗಾಂಧಿ ಸ್ಕೂಟರ್ ನಲ್ಲಿ ಹೋಗ್ತಾ ಇದ್ರೆ, ಸ್ಕೂಟರ್ ಹಿಂದೆ ಓಡಿ ಓಡಿ ಭದ್ರತಾ ಸಿಬ್ಬಂದಿ ಸುಸ್ತಾಗಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್