ನವದೆಹಲಿ: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ನಾಯಕ ಸಲಹೆ ಕೊಟ್ಟಿದ್ದಾರೆ. ದುರಹಂಕಾರದ ಕುರ್ಚಿಯಿಂದ ಕೆಳಗಿಳಿದು ಬನ್ನಿ, ರೈತರಿಗೆ ಅವರ ಹಕ್ಕುಗಳನ್ನು ನೀಡುವ ಬಗ್ಗೆ ಯೋಚಿಸಿ ಎಂದು ರಾಹುಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೇಂದ್ರದ ಹೊಸ ಕೃಷಿ-ಮಾರುಕಟ್ಟೆ ಕಾನೂನುಗಳ ವಿರುದ್ಧ ಹೆಚ್ಚಾಗಿ ಪಂಜಾಬ್ ಮತ್ತು ಹರಿಯಾಣ ಮೂಲದ ರೈತರು ರಾಷ್ಟ್ರ ರಾಜಧಾನಿಯ ಸಿಂಗು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಶ್ರಮಕ್ಕೆ ಎಲ್ಲರೂ ಆಭಾರಿಯಾಗಿದ್ದಾರೆ, ಹೀಗಾಗಿ ಅವರಿಗೆ ನ್ಯಾಯ ಒದಗಿಸುವ ಮೂಲಕ ನಾವು ಅವರು ಋಣವನ್ನು ತೀರಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
अन्नदाता सड़कों-मैदानों में धरना दे रहे हैं,
और
‘झूठ’ टीवी पर भाषण!किसान की मेहनत का हम सब पर क़र्ज़ है।
ये क़र्ज़ उन्हें न्याय और हक़ देकर ही उतरेगा, न कि उन्हें दुत्कार कर, लाठियाँ मारकर और आंसू गैस चलाकर।
जागिए, अहंकार की कुर्सी से उतरकर सोचिए और किसान का अधिकार दीजिए।
— Rahul Gandhi (@RahulGandhi) December 1, 2020
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ರೈತರ ಕಠಿಣ ಪರಿಶ್ರಮಕ್ಕೆ ನಾವೆಲ್ಲರೂ ಋಣಿಯಾಗಿದ್ದೇವೆ. ರೈತರಿಗೆ ನ್ಯಾಯ ಒದಗಿಸುವುದರ ಮೂಲಕ ಮಾತ್ರ ಈ ಋಣವನ್ನು ತೀರಿಸಲು ಸಾಧ್ಯ. ಪ್ರತಿಭಟನಾ ನಿರತ ರೈತರು ತಮ್ಮ ಹಕ್ಕುಗಳನ್ನು ಕೇಳುತ್ತಿದ್ದಾರೆ. ಮೊದಲು ಕೇಂದ್ರ ಸರ್ಕಾರ ಅಹಂಕಾರವನ್ನು ಬಿಟ್ಟು, ರೈತರ ಪ್ರತಿಭಟನೆಗೆ ಸ್ಪಂದಿಸಬೇಕು. ರೈತರಿಗೆ ಅವರ ಹಕ್ಕುಗಳನ್ನು ನೀಡಬೇಕು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಅನ್ನ ಬೆಳೆಯುವ ರೈತರು ರಸ್ತೆಗಳಲ್ಲಿ, ಹೊಲ-ಗದ್ದೆಗಳಲ್ಲಿ ಕುಳಿತು ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಾವೆಲ್ಲರೂ ರೈತರ ಋಣದಲ್ಲಿದ್ದೇವೆ ಎಂಬದುನ್ನು ಅರಿತು, ಅವರು ಕೇಳುತ್ತಿರುವ ಹಕ್ಕುಗಳನ್ನು ನೀಡಿ, ಅವರಿಗೆ ನ್ಯಾಯ ಸಲ್ಲಿಸುವ ಮೂಲಕ ಆ ಋಣವನ್ನು ತೀರಿಸಬೇಕೇ ಹೊರತು, ಅವರನ್ನು ಲಾಠಿಯಿಂದ ಹೊಡೆದು, ಅಶ್ರವಾಯು ಪ್ರಯೋಗಿಸಿ ದೌರ್ಜನ್ಯವೆಸಗುವುದಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಅನ್ನದಾತರು ರಸ್ತೆಯಲ್ಲಿ ಕುಳಿತಿದ್ದರೇ ಟಿವಿಯಲ್ಲಿ ಭಾಷಣಗಳು ಬರುತ್ತಿವೆ, ಶ್ರಮಜೀವಿಗಳ ಋಣದಲ್ಲಿದ್ದೇವೆ, ಅವರಿಗೆ ನ್ಯಾಯ ಒದಗಿಸುವ ಮೂಲಕ ಅವರ ಋಣ ತೀರಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
