Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಹುಲ್ ಗಾಂಧಿ ಮೇಲೆ ಶ್ರೀರಾಮನ ರಕ್ಷೆ ಇರಲಿದೆ : ಅಯೋಧ್ಯೆಯ ಪ್ರಧಾನ ಅರ್ಚಕರ ಆಶೀರ್ವಾದ

Facebook
Twitter
Telegram
WhatsApp

ಉತ್ತರಪ್ರದೇಶ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಮೂಲಕ ಪಕ್ಷ ಸಂಘಟನೆ ಮಾಡಲು ಹೊರಟಿದ್ದಾರೆ. ಕೊನೆಯಲ್ಲಿ ಜಮ್ಮು ಕಾಶ್ಮೀರ ತಲುಪಲಿದ್ದಾರೆ. ಈ ಮಧ್ಯೆ ಭಾರತ್ ಜೋಡೋ ಯಾತ್ರೆಗೆ ಸಾಕಷ್ಟು ಜನ ಜೊತೆಯಾಗಿದ್ದಾರೆ. ಇದೀಗ ಅಯೋಧ್ಯೆಯ ರಾಮಮಂದಿರದ ಪ್ರಧಾನ ಅರ್ಚಕ ಸಂತ್ಯೇಂದ್ರ ದಾಸ್ ಅವರ ಬೆಂಬಲವೂ ಸಿಕ್ಕಿದೆ.

ಈ ಸಂಬಂಧ ಪತ್ರ ಒಂದನ್ನು ಬರೆದಿರುವ ಅರ್ಚಕರು, ರಾಹುಲ್ ಗಾಂಧಿ ಮೇಲೆ ಶ್ರೀರಾಮನ ರಕ್ಷೆ ಇರಲಿದೆ. ಸರ್ವೇ ಜನತೋ ಸರ್ವೇ ಸುಖಿನೋ ಎಂಬಂತೆ ಜನರ ಹಿತಾಸಕ್ತಿಗಾಗಿ ನೀವೂ ಮಾಡುತ್ತಿರುವ ಹೋರಾಟಕ್ಕೆ ಯಶಸ್ಸು ಸಿಗಲಿದೆ. ಮುಂದಿನ ಕೆಲಸಗಳು ನೆರವೇರಲಿದೆ. ನಿಮ್ಮ ಆರೋಗ್ಯ ಇನ್ನೂ ಸುದೀರ್ಘವಾಗಿರಲಿದೆ. ಶ್ರೀರಾಮನ ಆಶೀರ್ವಾದ ನಿಮ್ಮ ಮೇಲೆ ಇರಲಿದೆ ಎಂದು ಆಶೀರ್ವಾದ ಮಾಡಿದ್ದಾರೆ.

ಸತ್ಯೇಂದ್ರ ದಾಸ್ ಅವರು ಭಾರತ್ ಜೋಡೋ ಯಾತ್ರೆಯಲ್ಲೂ ಭಾಗಿಯಾಗುವ ಸಾಧ್ಯತೆ ಇತ್ತು. ಆದರೆ ಅವರ ಆರೋಗ್ಯ ಕೈಕೊಟ್ಟಿದ್ದರಿಂದ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗುತ್ತಿರಲಿಲ್ಲ. ಇನ್ನು ಭಾರತ್ ಜೋಡೋ ಯಾತ್ರೆಯನ್ನು ಸ್ವಲ್ಪ ದಿನಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಇದೀಗ ಒಂಭತ್ತು ದಿನಗಳ ಬಳಿಕ ಇಂದಿನಿಂದ ಮತ್ತೆ ಯಾತ್ರೆ ಶುರುವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!