Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ : ಅಪಾರ ಪ್ರಮಾಣದ ಚಿನ್ನಾಭರಣ ವಶ

---Advertisement---

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಹಲವು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಭ್ರಷ್ಟಾಚಾರ ಆರೋಪ ಕೇಳಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದ್ದಾರೆ. ನಾಲ್ವರು ಅಧಿಕಾರಿಗಳ ಮನೆ ಹಾಗೂ ಸಂಬಂಧ ಪಟ್ಟ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಟೌನ್ ಅಂಡ್ ಪ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲ ಗಿರಿನಗರದ 4ನೇ ಫೇಸ್ ವಿಶ್ವೇಶ್ವರಯ್ಯ ರಸ್ತೆ ಬಳಿ ಇರುವ ಬಂಗಲೆ ಮೇಲೆ ಎಸ್.ಪಿ.ಶ್ರೀನಾಥ್ ಜೋಷಿ ನೇತೃತ್ವದಲ್ಲಿ ಅಧಿಕಾರಿಗಲಕ ತಂಡ ದಾಳಿ ನಡೆಸಿದೆ.

ಬೆಳಗ್ಗೆ 7 ಗಂಟೆಗೇನೆ ದಾಳಿ ನಡೆಸಿದ್ದಾರೆ. ಈ ವೇಳೆ ಸಿಕ್ಕ ಅಪಾರ ಪ್ರಮಾಣದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಮನೆಯಲ್ಲೆಲ್ಲಾ ಪರಿಶೀಲನೆ ನಡೆಸಿದ್ದು, ಬೆಂಗಳೂರು ಟೌನ್ ಅಂಡ್ ಪ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ. ಸ್ಥಳಕ್ಕೆ ಅಕ್ಕ ಸಾಲಿಗರನ್ನು ಕರೆಸಿ ಎಲ್ಲವನ್ನು ಪರಿಶೀಲನೆ ಮಾಡಿದ್ದಾರೆ.

ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಇರುವಾಗಲೇ ತಿಪ್ಪೇಸ್ವಾಮಿ ಅವರ ಮಗಳು ಕಾಲೇಜಿಗೆ ಹೊರಟಿದ್ದರು. ಅವರ ಸ್ಕೂಟರ್ ರೀಡಿಂಗ್ ಮೀಟರ್, ಬ್ಯಾಗ್ವೆಲ್ಲವನ್ನು ಪರಿಶೀಲನೆ ಮಾಡಿ ಅಧಿಕಾರಿಗಳು ಕಳುಹಿಸಿದ್ದಾರೆ. ಇಂದು ಬೆಳಗ್ಗೆಯಿಂದಾನೇ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿರುವ ಲೋಕಾಯುಕ್ತ ಅಧಿಕಾರಿಗಳು, ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನದ ಇಲಾಖೆಯ ಕೃಷ್ಣವೇಣಿ ಮನೆ, ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಬೆಂಗಳೂರಿನ ಅಬಕಾರಿ ಇಲಾಖೆಯ ಎಸ್ ಪಿ ಮಹೇಶ್ ನಿವಾಸ ಹಾಗೂ ಕಚೇರಿ ಮೇಲು ದಾಳಿ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...