Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕನ ಮನೆ ಮೇಲೆ ದಾಳಿ : ಲಕ್ಷ ಲಕ್ಷ ಚಿನ್ನ ವಶಕ್ಕೆ

Facebook
Twitter
Telegram
WhatsApp

ಶಿವಮೊಗ್ಗ: ರಾಜ್ಯಾದ್ಯಂತ ಇಂದು ಬೆಳಗ್ಗೆಯಿಂದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುವುದಕ್ಕೆ ಮುಂದಾಗಿದ್ದಾರೆ. ಹಲವೆಡೆ ದಾಳಿ ನಡೆಸಿ, ಸಾಕಷ್ಟು ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಹನ್ನೆರಡು ಅಧಿಕಾರಿಗಳಿಗೆ ಸಂಬಂಧಪಟ್ಟಂತ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.

ಕಾನೂನು ಮಾಪನ ಅಧಿಕಾರಿ ಅಖ್ತರ್ ಅಲಿ ಅವರ ಮನೆಯಲ್ಲಿ ದಾಳಿ ನಡೆಸಿದಾಗ 25 ಲಕ್ಷ ಹಣ ಒಂದು ರೂಮಿನಲ್ಲಿ ಸಿಕ್ಕಿದೆ. ಮನೆಯಲ್ಲಿದ್ದ ಎರಡು ಕೆಜಿ ಚಿನ್ನವನ್ನು ಮನೆಯವರೇ ಬಟ್ಟೆಯಿಂದ ಕಟ್ಟಿ ಹೊರಗೆ ಎಸೆದಿದ್ದರು. ಅದನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾಗಿರುವ ಪ್ರಕಾಶ್ ಅವರ ಕೃಷಿ ನಗರದಲ್ಲಿರುವ ನಿವಾಸದಲ್ಲಿ ಈ ದಾಳಿ ನಡೆದಿದೆ. ಈ ವೇಳೆ ಒಂದು ಕೆಜಿ ಚಿನ್ನಾಭರಣ, ಮೂರು ಕೆಜಿ ಬೆಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಿಶೀಲನೆ ವೇಳೆ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಅದರಲ್ಲಿ ಲಕ್ಷಾಂತರ ರೂಪಾಯಿ ಇದೆ ಎನ್ನಲಾಗಿದೆ. ಅಕ್ಕಸಾಲಿಗರನ್ನು ಕರೆಸಿ, ಚಿನ್ನಾಭರಣವನ್ನು ತೂಕ ಮಾಡಿಸಿದ್ದಾರೆ. ಈ ಎಲ್ಲವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಎಫ್ಡಿಎ ಅಧಿಕಾರಿ ಮಂಜುನಾಥ್ ಮನೆಯಲ್ಲೂ ದಾಳಿ ನಡೆಸಿದ್ದು, 60 ಲಕ್ಷಕ್ಕೂ ಹೆಚ್ಚು ಚಿನ್ನಾಭರಣ ಪತ್ತೆಯಾಗಿದ್ದು, 9 ಕೆಜಿಯಷ್ಟು ಬೆಳ್ಳಿಯ ಆಭರಣ ಸಿಕ್ಕಿದೆ. ನಾಲ್ಕು ಲಕ್ಷ ನಗದು ಕೂಡ ಸಿಕ್ಕಿದೆ. ಇನ್ನು ಯಾದಗಿರಿ, ಮೈಸೂರು, ತುಮಕೂರಿನ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಐಷರಾಮಿ ವಾಚ್ ಗಳು, ಚಿನ್ನಾಭರಣ, ಬೆಳ್ಳಿ, ನಗದು ಸೇರಿದಂತೆ ಎಲ್ಲವು ದುಬಾರಿ ವಸ್ತುಗಳೇ ಸಿಕ್ಕಿವೆ. ಎಲ್ಲವನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!