Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕನ ಮನೆ ಮೇಲೆ ದಾಳಿ : ಲಕ್ಷ ಲಕ್ಷ ಚಿನ್ನ ವಶಕ್ಕೆ

---Advertisement---

ಶಿವಮೊಗ್ಗ: ರಾಜ್ಯಾದ್ಯಂತ ಇಂದು ಬೆಳಗ್ಗೆಯಿಂದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುವುದಕ್ಕೆ ಮುಂದಾಗಿದ್ದಾರೆ. ಹಲವೆಡೆ ದಾಳಿ ನಡೆಸಿ, ಸಾಕಷ್ಟು ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಹನ್ನೆರಡು ಅಧಿಕಾರಿಗಳಿಗೆ ಸಂಬಂಧಪಟ್ಟಂತ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.

ಕಾನೂನು ಮಾಪನ ಅಧಿಕಾರಿ ಅಖ್ತರ್ ಅಲಿ ಅವರ ಮನೆಯಲ್ಲಿ ದಾಳಿ ನಡೆಸಿದಾಗ 25 ಲಕ್ಷ ಹಣ ಒಂದು ರೂಮಿನಲ್ಲಿ ಸಿಕ್ಕಿದೆ. ಮನೆಯಲ್ಲಿದ್ದ ಎರಡು ಕೆಜಿ ಚಿನ್ನವನ್ನು ಮನೆಯವರೇ ಬಟ್ಟೆಯಿಂದ ಕಟ್ಟಿ ಹೊರಗೆ ಎಸೆದಿದ್ದರು. ಅದನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾಗಿರುವ ಪ್ರಕಾಶ್ ಅವರ ಕೃಷಿ ನಗರದಲ್ಲಿರುವ ನಿವಾಸದಲ್ಲಿ ಈ ದಾಳಿ ನಡೆದಿದೆ. ಈ ವೇಳೆ ಒಂದು ಕೆಜಿ ಚಿನ್ನಾಭರಣ, ಮೂರು ಕೆಜಿ ಬೆಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಿಶೀಲನೆ ವೇಳೆ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಅದರಲ್ಲಿ ಲಕ್ಷಾಂತರ ರೂಪಾಯಿ ಇದೆ ಎನ್ನಲಾಗಿದೆ. ಅಕ್ಕಸಾಲಿಗರನ್ನು ಕರೆಸಿ, ಚಿನ್ನಾಭರಣವನ್ನು ತೂಕ ಮಾಡಿಸಿದ್ದಾರೆ. ಈ ಎಲ್ಲವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಎಫ್ಡಿಎ ಅಧಿಕಾರಿ ಮಂಜುನಾಥ್ ಮನೆಯಲ್ಲೂ ದಾಳಿ ನಡೆಸಿದ್ದು, 60 ಲಕ್ಷಕ್ಕೂ ಹೆಚ್ಚು ಚಿನ್ನಾಭರಣ ಪತ್ತೆಯಾಗಿದ್ದು, 9 ಕೆಜಿಯಷ್ಟು ಬೆಳ್ಳಿಯ ಆಭರಣ ಸಿಕ್ಕಿದೆ. ನಾಲ್ಕು ಲಕ್ಷ ನಗದು ಕೂಡ ಸಿಕ್ಕಿದೆ. ಇನ್ನು ಯಾದಗಿರಿ, ಮೈಸೂರು, ತುಮಕೂರಿನ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಐಷರಾಮಿ ವಾಚ್ ಗಳು, ಚಿನ್ನಾಭರಣ, ಬೆಳ್ಳಿ, ನಗದು ಸೇರಿದಂತೆ ಎಲ್ಲವು ದುಬಾರಿ ವಸ್ತುಗಳೇ ಸಿಕ್ಕಿವೆ. ಎಲ್ಲವನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment