ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕನ ಮನೆ ಮೇಲೆ ದಾಳಿ : ಲಕ್ಷ ಲಕ್ಷ ಚಿನ್ನ ವಶಕ್ಕೆ

ಶಿವಮೊಗ್ಗ: ರಾಜ್ಯಾದ್ಯಂತ ಇಂದು ಬೆಳಗ್ಗೆಯಿಂದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುವುದಕ್ಕೆ ಮುಂದಾಗಿದ್ದಾರೆ. ಹಲವೆಡೆ ದಾಳಿ ನಡೆಸಿ, ಸಾಕಷ್ಟು ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಹನ್ನೆರಡು ಅಧಿಕಾರಿಗಳಿಗೆ ಸಂಬಂಧಪಟ್ಟಂತ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.

ಕಾನೂನು ಮಾಪನ ಅಧಿಕಾರಿ ಅಖ್ತರ್ ಅಲಿ ಅವರ ಮನೆಯಲ್ಲಿ ದಾಳಿ ನಡೆಸಿದಾಗ 25 ಲಕ್ಷ ಹಣ ಒಂದು ರೂಮಿನಲ್ಲಿ ಸಿಕ್ಕಿದೆ. ಮನೆಯಲ್ಲಿದ್ದ ಎರಡು ಕೆಜಿ ಚಿನ್ನವನ್ನು ಮನೆಯವರೇ ಬಟ್ಟೆಯಿಂದ ಕಟ್ಟಿ ಹೊರಗೆ ಎಸೆದಿದ್ದರು. ಅದನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾಗಿರುವ ಪ್ರಕಾಶ್ ಅವರ ಕೃಷಿ ನಗರದಲ್ಲಿರುವ ನಿವಾಸದಲ್ಲಿ ಈ ದಾಳಿ ನಡೆದಿದೆ. ಈ ವೇಳೆ ಒಂದು ಕೆಜಿ ಚಿನ್ನಾಭರಣ, ಮೂರು ಕೆಜಿ ಬೆಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಿಶೀಲನೆ ವೇಳೆ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಅದರಲ್ಲಿ ಲಕ್ಷಾಂತರ ರೂಪಾಯಿ ಇದೆ ಎನ್ನಲಾಗಿದೆ. ಅಕ್ಕಸಾಲಿಗರನ್ನು ಕರೆಸಿ, ಚಿನ್ನಾಭರಣವನ್ನು ತೂಕ ಮಾಡಿಸಿದ್ದಾರೆ. ಈ ಎಲ್ಲವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಎಫ್ಡಿಎ ಅಧಿಕಾರಿ ಮಂಜುನಾಥ್ ಮನೆಯಲ್ಲೂ ದಾಳಿ ನಡೆಸಿದ್ದು, 60 ಲಕ್ಷಕ್ಕೂ ಹೆಚ್ಚು ಚಿನ್ನಾಭರಣ ಪತ್ತೆಯಾಗಿದ್ದು, 9 ಕೆಜಿಯಷ್ಟು ಬೆಳ್ಳಿಯ ಆಭರಣ ಸಿಕ್ಕಿದೆ. ನಾಲ್ಕು ಲಕ್ಷ ನಗದು ಕೂಡ ಸಿಕ್ಕಿದೆ. ಇನ್ನು ಯಾದಗಿರಿ, ಮೈಸೂರು, ತುಮಕೂರಿನ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಐಷರಾಮಿ ವಾಚ್ ಗಳು, ಚಿನ್ನಾಭರಣ, ಬೆಳ್ಳಿ, ನಗದು ಸೇರಿದಂತೆ ಎಲ್ಲವು ದುಬಾರಿ ವಸ್ತುಗಳೇ ಸಿಕ್ಕಿವೆ. ಎಲ್ಲವನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago