Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುರುವನೂರು ರಸ್ತೆಯ ರೈಲ್ವೆ ಕೆಳ ಸೇತುವೆ ಅವ್ಯವಸ್ಥೆ : ಕೂಡಲೇ ಸರಿಪಡಿಸಿ : ಸಂಸದ ಗೋವಿಂದ ಕಾರಜೋಳ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಅ. 09 : ನಗರದಿಂದ ಹಾದು ಹೋಗುವ ತುರುವನೂರು ರಸ್ತೆಯಲ್ಲಿ ರೈಲು ಮಾರ್ಗವೂ ಕೂಡಾ ಹಾದು ಹೋಗಿದೆ. ಈ ಮಾರ್ಗದ ಮೂಲಕ ಬೆಳಗಟ್ಟ – ತುರುವನೂರು- ಜಗಳೂರು ಮತ್ತು ಬೆಳಗಟ್ಟ – ನಾಯಕನಹಟ್ಟಿ – ಚಳ್ಳಕೆರೆ ಮಾರ್ಗಗಲ್ಲಿ ಹಲವಾರು ಹಳ್ಳಿಗಳಿಗೆ ಇದೇ ರೈಲ್ವೆ ಕೆಳ ಸೇತುವೆ ಮೂಲಕವೇ ಹಾದು ಹೋಗಬೇಕು. ಆದರೆ ಈ ಕೆಳಸೇತುವೆಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದ್ದು. ಪ್ರತಿ ಸಾರಿ ಮಳೆ ಬಂದಾಗ ರೈಲ್ವೆ ಕೆಳ ಸೇತುವೆಯಲ್ಲಿ ನೀರು ನಿಲ್ಲುತ್ತದೆ. ಅದೇ ರೀತಿ ನಿನ್ನೆ (ಮಂಗಳವಾರ) ರಾತ್ರಿ ಸುರಿದ ಮಳೆಗೆ ಸೇತುವೆಯಲ್ಲಿ ನೀರು ಸಂಗ್ರಹವಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿರುವುದನ್ನು ಸಂಸದ ಗೋವಿಂದ ಕಾರಜೋಳ ಇಂದು ವೀಕ್ಷಣೆ ಮಾಡಿ ರೈಲ್ವೆ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡು ಕೂಡಲೇ ಸರಿಪಡಿಸುವಂತೆ ಸೂಚನೆ ನೀಡಿದರು.

ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ರೈಲ್ವೆ ಅಧಿಕಾರಿಗಳ ಸಭೆಯಲ್ಲಿ ಈ ರೀತಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ರೈಲ್ವೆ ಕೆಳಸೇತುವೆಗಳ ಬಳಿ ನೀರು ಜಮಾವಣೆಯಾಗುತ್ತಿದ್ದು, ಇಂತಹ ಸೇತುವೆಗಳನ್ನು ಪಟ್ಟಿ ಮಾಡಿ ಸಭೆಯಲ್ಲಿ ರೈಲ್ವೆ ಅಧಿಕಾರಿಗಳ ಗಮನ ಸೆಳೆಯಲಾಗಿತ್ತು. ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂತಹ ಸಾಕಷ್ಟು ಸೇತುವೆಗಳ ಬಳಿ ನೀರು ಜಮಾವಣೆಯಾಗುತ್ತಿದ್ದು, ಕೂಡಲೇ ಇವುಗಳನ್ನು ಸರಿಪಡಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment