Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾರೀ ಮಳೆ: ನಾಳೆ ಮತ್ತೆ ಬೆಂಗಳೂರು ಶಾಲೆಗಳಿಗೆ ರಜೆ

---Advertisement---

 

ಬೆಂಗಳೂರು: ಮಳೆರಾಯ ಅದ್ಯಾಕೋ ಏನೋ ಬಿಡುವನ್ನೇ ಕೊಡದಂತೆ ಸುರಿಯುತ್ತಿದ್ದಾನೆ. ಅತ್ತ ಬೆಳೆಯನ್ನ ಕೊಯ್ಲು ಮಾಡುವ ಸಮಯ ಅದು ಆಗ್ತಿಲ್ಲ. ಇತ್ತ ಗಿಡಗಳಿಗೆ ಔಷಧಿ ಹೊಡೆಯುವ ಸಮಯ. ಅದಕ್ಕೂ ಸಮಯ ಸಾಕಾಗುತ್ತಿಲ್ಲ. ಆದರೆ ಮಳೆರಾಯ ಮಾತ್ರ ಹೊರಗಡೆ ಹೋಗುವುದಕ್ಕೂ ಸಾಧ್ಯವಾಗದಂತೆ ಧೋ ಎಂದು ಸುರಿಯುತ್ತಲೇ ಇದ್ದಾನೆ. ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ಒಬ್ಬೊಬ್ಬರಿಗೆ ಒಂದೊಂದು ಸಂಕಟ. ಕೆಲಸಕ್ಕೆ ಹೋಗುವವರ ಪಾಡು ಒಂಥರ ಆದ್ರೆ ಮನೆಯಲ್ಲಿಯೇ ಇರುವ, ಅದರಲ್ಲೂ ಗ್ರಾಮೀಣ ಭಾಗದಲ್ಲಿರುವವರಿಗಂತು ಹೊರಗೂ ಹೋಗದ, ಕೂಲಿಗೂ ಹೋಗಲಾರದ ಸ್ಥಿತಿ.

ಬೆಂಗಳೂರಂತು ಕೆಲವು ನಗರಗಳು ಅಕ್ಷರಶಃ ಸಮುದ್ರವಾಗಿದೆ. ಜನರಂತೂ ನೀರಿನಲ್ಲಿಯೇ ನೆನೆದುಕೊಂಡೆ ಓಡಾಡುತ್ತಿದ್ದಾರೆ. ಆಟೋಗಳು ನೀರಿನಲ್ಲಿ ಓಡಿಸಲಾಗದೆ ಕೆಟ್ಟು ನಿಲ್ಲುತ್ತಿವೆ. ಶಾಲಾ ಕಾಲೇಜಿಗೆ ಹೋಗುವ ಮಕ್ಕಳ ಪಾಡಂತು ಕೇಳುವಂತೆಯೇ ಇಲ್ಲ. ಮಂಡಿಯುದ್ಧ ನೀರಿನಲ್ಲಿ, ನೆನೆದ ಬಟ್ಟೆಯಲ್ಲೇ ಶಾಲಾ-ಕಾಲೇಜಿಗೆ ಹೋಗಬೇಕು. ಹೀಗಾಗಿ ನಾಳೆಯೂ ಮಳೆ ಹೆಚ್ಚಾಗಿ ಬರುವ ಸಾಧ್ಯತೆ ಇರುವ ಕಾರಣ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಂಗನವಾಡಿ, ಅನುದಾನಿ ಶಾಲಾ-ಕಾಲೇಜು, ಸರ್ಕಾರಿ, ಖಾಸಗಿ ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಿ, ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಪದವಿ, ಡಿಪ್ಲೋಮಾ ಕಾಲೇಜುಗಳಿಗೆ ಯಾವುದೇ ರೀತಿಯ ರಜೆ ಇರುವುದಿಲ್ಲ. ಹಾಗೇ ಕಾಲೇಜು ಕಟ್ಟಡಗಳು ದುರಸ್ತಿಯಲ್ಲಿದ್ದರೆ ಅಂತಹ ಕಟ್ಟಡಗಳನ್ನು ಯಾವುದೇ ಕಾರಣಕ್ಕೂ ಪಾಠ ಮಾಡಲು ಬಳಸುವಂತಿಲ್ಲ. ವಿದ್ಯಾರ್ಥಿಗಳ ಸುರಕ್ಷತೆಯ ಕಡೆಗೆ ಕಾಲೇಜು ಮಂಡಳಿ ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿ ಜಗದೀಶ್ ಅವರು ತಮ್ಮ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ಹೊರಗಡೆ ಹೋಗುವಾಗ ಜನರು ಕೂಡ ತಮ್ಮ ಬಗ್ಗೆ ಕಾಳಜಿ ವಹಿಸಬೇಕಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment