Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

---Advertisement---

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ ಮಳೆಯ ಸುಳಿವೇ ಇಲ್ಲದಿರುವುದು ಜನ ಸುಸ್ತಾಗಿ ಹೋಗುತ್ತಿದ್ದಾರೆ. ಆದರೆ ಹವಮಾನ ಇಲಾಖೆ ಕೊಂಚ ರಿಲ್ಯಾಕ್ಸ್ ಆಗುವಂತೆ ಸುದ್ದಿಯೊಂದನ್ನು ನೀಡಿದೆ.

ಇಂದಿನಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಮೈಸೂರು, ಹಾಸನ, ರಾಮನಗರ, ಮಂಡ್ಯ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ದಿನೇ ದಿನೇ ಉಷ್ಣಾಂಶವೂ ಏರಿಕೆಯಾಗುತ್ತಿದೆ. ಹೀಗಾಗಿ ಬಿಸಿಲಿನಿಂದ ತಪ್ಪಿಸಿಕೊಳ್ಳುವುದಕ್ಕೆ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಆದರೂ ಶೆಕೆ ತಡೆಯಲಾಗುತ್ತಿಲ್ಲ. ಸದ್ಯ ಬೆಂಗಳೂರಿಗರಿಗೂ ಮೇ 4ರಿಂದ ವರುಣ ಕರುಣೆ ತೋರುವ ಸಾಧ್ಯತೆ ಇದೆ. ಹವಮಾನ ಇಲಾಖೆ ಈ ಸಂಬಂಧ ಮಾಹಿತಿ ನೀಡಿದೆ. ಮೇ 4ರಿಂದ ಮೇ 15ರವರೆಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment