Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ರೈತರಲ್ಲಿ ಸಂತಸ ತಂದ ಮಳೆ : ಉಳುಮೆಗೆ ಸಿದ್ಧತೆ

---Advertisement---

 

ಚಿತ್ರದುರ್ಗ: ಕಳೆದ ಬಾರಿ ಮಳೆಯಿಲ್ಲದೆ, ಸರಿಯಾದ ಬಿತ್ತನೆ ಮಾಡಲಾಗದೆ ಹೈರಾಣಾಗಿದ್ದ ರೈತರ ಮೊಗದಲ್ಲಿ ಈಗ ಸಂತಸ ತುಂಬಿ ತುಳುಕುತ್ತಿದೆ. ಜಿಲ್ಲೆಯಲ್ಲೂ ಮಳೆಯ ದರ್ಶನ ಭಾಗ್ಯವಾಗಿದೆ. ಹೀಗಾಗಿ ರೈತರು ಉಳುಮೆ ಮಾಡಲು ಎಲ್ಲಾ ತಯಾರಿ ನಡೆಸುತ್ತಿದ್ದಾರೆ. ಇಷ್ಟು ದಿನ ಎಲ್ಲೆಡೆ ಮಳೆಯಾದರೂ ಚಿತ್ರದುರ್ಗದಲ್ಲಿ ಮಳೆಯ ಸೂಚನೆಯೇ ಇರಲಿಲ್ಲ. ಇದೀಗ ಜಿಲ್ಲೆಯಾದ್ಯಂತ ನಿರೀಕ್ಷೆಗೂ ಮೀರಿ ಮಳೆಯಾಗಿದ್ದು, ಉಳುಮೆ ಮಾಡಲು ತಯಾರಿ ನಡೆಸುತ್ತಿದ್ದಾರೆ.

ಹೊಸದುರ್ಗ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದೆ. ಮಾಡದಕೆರೆಯಲ್ಲಿ 42 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗದಲ್ಲಿ 34.1 ಮಿ.ಮೀಟರ್ ಮಳೆಯಾಗಿದೆ. ಇನ್ನೆರಡು ದಿನ ಇದೇ ರೀತಿ ಮಳೆಯಾದರೆ ಬೆಳೆಯುವ ರೈತನಿಗೆ ಸಾಕಷ್ಟು ಅನುಕೂಲವಾಗಿದೆ. ಮಳೆ ಇಲ್ಲದೆ ಅಡಿಕೆ ಮರ, ತೆಂಗಿನ ಮರಗಳನ್ನು ಉಳಿಸಿಕೊಳ್ಳುವುದಕ್ಕೆ ಕಷ್ಟ ಪಡುತ್ತಿದ್ದರು. ಈಗ ಜೋರು ಮಳೆಯಿಂದ ಅಡಿಕೆ ಬೆಳೆಯ ಬುಡಕ್ಕೊಂದಿಷ್ಟು ತಂಪಾದ ವಾರಾವರಣ ನಿರ್ಮಾಣವಾಗಿದೆ.

 

ಜೋರು ಮಳೆಯಿಂದ ಒಂದಷ್ಟು ಅನಾಹುತವೂ ನಡೆದಿದೆ. ಮೂರು ಮನೆಗಳಿಗೆ ತೀವ್ರ ಹಾನಿಯಾಗಿದೆ. ಹದಿಮೂರು ಮನೆಗಳುಗೆ ಭಾಗಶಃ ಹಾನಿಯಾಗಿದೆ. ಆರು ಹೆಕ್ಟೇರ್ ತೋಟಗಾರಿಕಾ ಬೆಳೆ, ಒಂದು ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. ಇನ್ನು ಚಿತ್ರದುರ್ಗದಲ್ಲಿ ಒಂಭತ್ತು ಮನೆಗಳಿಗೆ ಹಾನಿಯಾಗಿದೆ. ಹೀಗೆ ಜಿಲ್ಲೆಯ ಸುತ್ತಮುತ್ತಲಿನ ತಾಲೂಕಿನಲ್ಲಿ ಸಾಕಷ್ಟು ಹಾನಿಯಾಗಿದೆ. ಮಳೆಗಾಲ ಶಯರುವಾದಾಗ ಲೈಟ್ ಕಂಬದ ಸಮಸ್ಯೆ, ಮನೆಗಳ ಹಾನಿ, ಬೆಳೆ ಹಾನಿ ಆಗುತ್ತಲೇ ಇರುತ್ತದೆ. ಹೀಗಾಗಿ ಮಳೆಗಾಲ ಆರಂಭಕ್ಕೂ ಮುನ್ನವೇ ಒಂದಷ್ಟು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವುದು ಉತ್ತಮ. ಹೊರಗಡೆ ಹೋಗುವ ಜನ ಕೂಡ ಕೊಂಚ ಎಚ್ಚರ ವಹಿಸಿ, ಹೊರಗೆ ಹೋಗಬೇಕು. ಮಳೆ, ಗಾಳಿಗೆ ಸಿಲುಕದಂತೆ ಮುಂಜಾಗ್ರತೆ ವಹಿಸಬೇಕಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...