Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆ ಬಂತು, ಆಟ ನಿಲ್ತು, ಆದರೂ ಭಾರತ ಗೆಲ್ತು, ಅದು ಹೇಗೆ ? ಭಾರತ – ಐರ್ಲೆಂಡ್‌ ಮೊದಲ ಟಿ 20 ಪಂದ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ…!

Facebook
Twitter
Telegram
WhatsApp

 

 

ಸುದ್ದಿಒನ್

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಭಾರತ 2 ರನ್‌ಗಳಿಂದ ಗೆದ್ದುಕೊಂಡಿದೆ. ಮೂರು ಟಿ20 ಪಂದ್ಯಗಳ ಸರಣಿಯ ಅಂಗವಾಗಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ನಿಗಧಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿತು. 140 ರನ್ ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತ 6.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 47 ರನ್ ಗಳಿಸಿದ್ದಾಗ ಮಳೆ ಅಡ್ಡಿಪಡಿಸಿತು. ಆ ಬಳಿಕ ಪಂದ್ಯ ಮುಂದುವರಿಸುವ ಸ್ಥಿತಿ ಇಲ್ಲದ ಕಾರಣ ಡಕ್‌ವರ್ತ್‌ ಲೂಯಿಸ್‌ ನಿಯಮದ ಪ್ರಕಾರ ಭಾರತ 2 ರನ್‌ಗಳ ಜಯ ಸಾಧಿಸಿದೆ ಎಂದು ಪ್ರಕಟಿಸಲಾಯಿತು.

ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡ ಭಾರತದ ಬೌಲರ್ ಗಳ ದಾಳಿಗೆ ತತ್ತರಿಸಿತು. ಆರಂಭದಿಂದಲೂ ಒಂದರ ಮೇಲೊಂದು ವಿಕೆಟ್ ಕಳೆದುಕೊಂಡಿತು.  6.3 ಓವರ್ ಗಳಲ್ಲಿ 5 ವಿಕೆಟ್ (31 ರನ್) ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ, ಕೊನೆಯಲ್ಲಿ ಬ್ಯಾರಿ ಮೆಕಾರ್ಥಿ (51 ರನ್, 33 ಎಸೆತ, 4 ಬೌಂಡರಿ, 4 ಸಿಕ್ಸರ್) ಮತ್ತು ಕರ್ಟಿಸ್ ಕಾಂಫರ್ (39 ರನ್, 33 ಎಸೆತ, 3 ಬೌಂಡರಿ, 1 ಸಿಕ್ಸರ್) ಅಬ್ಬರದ ಬ್ಯಾಟಿಗ್ ನಿಂದಾಗಿ ಐರ್ಲೆಂಡ್ 139 ಸ್ಕೋರ್ ದಾಖಲಿಸಿತು. ಈ ಇಬ್ಬರ ಜೊತೆಯಾಟದಿಂದ 90 ರನ್ ಗಳಿಸಿದರು. ತಂಡದ ಉಳಿದವರು ಒಟ್ಟಾಗಿ ಗಳಿಸಿದ್ದು 42 ರನ್ ಮಾತ್ರ ಎಂಬುದು ಗಮನಾರ್ಹ

ಗುರಿ ತಲುಪುವ ನಿಟ್ಟಿನಲ್ಲಿ ಭಾರತದ ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್ (24) ಮತ್ತು ರುತುರಾಜ್ ಗಾಯಕ್ವಾಡ್ (ಅಜೇಯ 19) ಉತ್ತಮ ಆರಂಭ ನೀಡಿದರು. ಇಬ್ಬರೂ ಆಕ್ರಮಣಕಾರಿ ಆಟವಾಡಿದ್ದರಿಂದ ಪವರ್ ಪ್ಲೇ ಅಂತ್ಯಕ್ಕೆ ಭಾರತ 45/0 ರನ್ ಗಳಿಸಿದರು.

ಕ್ರೇಗ್ ಯಂಗ್ ಎಸೆದ ಏಳನೇ ಓವರ್‌ನಲ್ಲಿ ಜೈಸ್ವಾಲ್ ಮತ್ತು ತಿಲಕ್ ವರ್ಮಾ (0) ಕ್ರಮವಾಗಿ ಔಟಾದರು. ಅದೇ ಓವರ್‌ನ ಕೊನೆಯ ಎಸೆತದಲ್ಲಿ ಮಳೆ ಸುರಿಯಲಾರಂಭಿಸಿ ಆಟ ಸ್ಥಗಿತಗೊಂಡಿತು. ಬಳಿಕ ಮಳೆ ಕಡಿಮೆಯಾಗದ ಕಾರಣ ಡಕ್‌ವರ್ತ್ ಲೂಯಿಸ್ ಪ್ರಕಾರ ಭಾರತವನ್ನು ವಿಜಯಿ ಎಂದು ಘೋಷಿಸಲಾಯಿತು.

ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಸುದೀರ್ಘ ವಿರಾಮದ ನಂತರ ಫಾರ್ಮ್‌ ಗೆ ಮರಳಿದರು ಮತ್ತು ತೀಕ್ಷ್ಣವಾದ ಎಸೆತಗಳಿಂದ ಐರ್ಲೆಂಡ್‌ನ ಬ್ಯಾಟ್ಸ್‌ಮನ್‌ಗಳನ್ನು ಸಂಕಷ್ಟಕ್ಕೆ ಸಿಲುಕಿಸಿ
2 ವಿಕೆಟ್ ಪಡೆದರು. ಪ್ರಸಿದ್ಧ್ 2, ರವಿ ಬಿಷ್ಣೋಯ್ 2, ಅರ್ಷದೀಪ್ ಸಿಂಗ್ 1 ವಿಕೆಟ್ ಪಡೆದರು.

ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಅಲ್ಲದೆ, 11 ತಿಂಗಳ ನಂತರ ಟೀಂ ಇಂಡಿಯಾಗೆ ಮರಳಿರುವ ಜಸ್ಪ್ರೀತ್ ಬುಮ್ರಾ ಅವರು ನಾಯಕತ್ವದ ಮೊದಲ ಪಂದ್ಯದಲ್ಲೇ ತಂಡಕ್ಕೆ ಜಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಎರಡನೇ ಟಿ20 ಭಾನುವಾರ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

error: Content is protected !!