ಇನ್ನೂ 9 ದಿನ ಮಳೆ ಮುಂದುವರಿಕೆ : ಕೆಲವೆಡೆ ಶಾಲೆಗಳಿಗೆ ರಜೆ

1 Min Read

 

 

ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಜೋರು ಮಳೆಯಿಂದಾಗಿ ಜನ ಆತಂಕದಲ್ಲಿದ್ದಾರೆ. ಕೆಲವೊಂದು ಜಿಲ್ಲೆಗಳಲ್ಲಿ ಮನೆಯಿಂದ ಹೊರಗೆ ಬರುವುದಕ್ಕೂ ಕಷ್ಟವಾಗುತ್ತಿದೆ. ಹಳೆಯ ಮನೆಗಳಲ್ಲಿ ವಾಸ ಮಾಡುತ್ತಿರುವವರು ಮನೆ ಕುಸಿತದ ಆತಂಕದಲ್ಲಿದ್ದಾರೆ. ರಾಜ್ಯದಲ್ಲಿ ಇನ್ನು 9 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಬೆಳಗಾವಿ ಸೇರಿದಂತೆ 9 ಜಿಲ್ಲೆಗಳಿಗೆ ಪ್ರವಾದ ಭೀತಿ ಎದುರಾಗಿದೆ. ರೆಡ್ ಅಲರ್ಟ್ ಇರುವ ಜಿಲ್ಲೆಗಳ ಜನರಿಗೆ ಎಚ್ಚರದಿಂದ ಇರಲು ಸೂಚನೆ ನೀಡಲಾಗಿದೆ.

ಮಳೆಯಲ್ಲಿ ಪ್ರಕೃತಿ ಸೌಂದರ್ಯ ದುಪ್ಪಟ್ಟಾಗುತ್ತದೆ. ಈ ಸೌಂದರ್ಯ ನೋಡುವುದಕ್ಕೇನೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಪ್ರವಾಸಕ್ಕೆ ಬರುತ್ತಾರೆ. ಮಳೆ ಹೆಚ್ಚಾಗಿರುವ ಪರಿಣಾಮ ಪ್ರವಾಸಿಗರಿಗೂ ಸೂಚನೆ ನೀಡಲಾಗಿದೆ. ಇನ್ನು ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿತ್ರದುರ್ಗದಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಮಳೆಯ ಪ್ರಭಾವ ಕಡಿಮೆಯಾದ ಮೇಲೆ ಮತ್ತೆ ಶಾಲೆಗಳು ಪುನರಾರಂಭವಾಗುತ್ತವೆ.

Share This Article
Leave a Comment

Leave a Reply

Your email address will not be published. Required fields are marked *