Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಜ್ಯದಲ್ಲಿ ಮಳೆ ಮುಂದುವರಿಕೆ : ಯಾವೆಲ್ಲಾ ಪ್ರವಾಸಿ ತಾಣಗಳಲ್ಲಿ ಜನರಿಗೆ ನಿಷೇಧ ಹೇರಲಾಗಿದೆ ಗೊತ್ತಾ..?

---Advertisement---

ಮಳೆಗಾಲ ಬಂತು ಅಂದ್ರೆ ಪ್ರಕೃತಿಯನ್ನ ನೋಡುವುದೇ ಚೆಂದ. ಎಲ್ಲಾ ಕಡೆ ಹಸಿರು ತುಂಬಿರುತ್ತೆ, ಮೋಡಗಳು ಭೂಮಿಗೆ ತಾಗಿರುವಂತೆ ಫೀಲ್ ಆಗುತ್ತೆ, ಅಚ್ಚ ಹಸಿರಿನ ಎಲೆಗಳ ಮೇಲೆ ನೀರಿನ ಹನಿ ಹಾಗೆ ಇರುತ್ತದೆ. ಒಂದ ಎರಡಾ ಪ್ರಕೃತಿ ಸೌಂದರ್ಯ ಕಾಣುವ ರೀತಿ. ಅದರಲ್ಲೂ ಪ್ರವಾಸಿ ಪ್ರಿಯರಿಗೆ ಈ ವಾತಾವರಣ ಹೇಳಿ ಮಾಡಿಸಿದಂತೆ ಇರುತ್ತದೆ. ಮಳೆಗಾಲ ಎಂದಾಕ್ಷಣಾ ಅವರಿಗೆಲ್ಲ ನೆನಪಾಗುವುದೇ ಪ್ರವಾಸಿ ತಾಣಗಳು. ಅದರಲ್ಲೂ ಚಿಕ್ಕಮಗಳೂರು ಎಂದರೆ ಹೊರಟು ಬಿಡುವವರೇ ಜಾಸ್ತಿ.

ಆದರೆ ಈ ಮಳೆಯಲ್ಲಿ ಕೆಲವೊಂದು ಸ್ಥಳಗಳಿಗೆ ಹೋಗುವುದು ಅಪಾಯಕಾರಿ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಬೆಂಬಿಡದೆ ಸುರಿಯುತ್ತಿದೆ. ಇನ್ನು ಒಂದು ವಾರಗಳ ಕಾಲ ಮಳೆ ಮುಂದುವರೆಯುತ್ತದೆ ಎಂದೇ ಹವಮಾನ ಇಲಾಖೆ ಸೂಚನೆ ನೀಡಿದೆ. ಇದೀಗ ಚಿಕ್ಕಮಗಳೂರಿನ ಹಲವು ಪ್ರದೇಶಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರಿನ ಬಲ್ಲಾಳ ರಾಯನ ದುರ್ಗ, ರಾಣಿಝರಿ, ಬಂಡಾಜೆ ಫಾಲ್ಸ್ ಟ್ರಕ್ಕಿಂಗ್‌ಗೆ ನಿರ್ಬಂಧ ಹಾಕಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಳಗೊಂಡಿದೆ. ಪ್ರವಾಸಿಗರು ಚಾರಣದ ವೇಳೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಮೂಡಿಗೆರೆ ತಾಲೂಕಿನ ಬಲ್ಲಾಳ ರಾಯನ ದುರ್ಗ ಪ್ರವಾಸಿ ತಾಣ, ಕಳಸ ತಾಲೂಕಿನ ಬಂಡಾಜೆ ಫಾಲ್ಸ್‌ಗೆ ಕೊಪ್ಪ ವಿಭಾಗದ ಅರಣ್ಯ ಇಲಾಖೆ ಈ ಕ್ರಮಕೈಗೊಂಡಿದೆ. ಮುಂದಿನ 24 ಗಂಟೆಯಲ್ಲಿ ಬಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಓಡಾಡುವ ಜನ ಕೂಡ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ವಾಹನ ಸವಾರರು, ಕೆಲಸ ಕಾರ್ಯಗಳಿಗೆ ಹೋಗುವವರು ಮುಂಜಾಗ್ರತ ಕ್ರಮ ಕೈಗೊಳಗಳಬೇಕಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...