Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆ ಅವಾಂತರ.. ಯಾವೆಲ್ಲಾ ಜಿಲ್ಲೆಯಲ್ಲಿ ಹೇಗಿದೆ ಪರಿಸ್ಥಿತಿ..?

Facebook
Twitter
Telegram
WhatsApp

ಬೆಂಗಳೂರು: ರಾಜ್ಯದೆಲ್ಲೆಡೆ ಮಳೆಯ ಅಬ್ಬರ ಜೋರಾಗಿದೆ. ಬೆಂಬಿಡದೆ ಸುರಿಯುತ್ತಿರುವ ಮಳೆಗೆ ಜನ ನಿತ್ರಾಣರಾಗಿದ್ದಾರೆ. ಎಷ್ಟೋ ಜಿಲ್ಲೆಯಲ್ಲಿ ಮಳೆಯಿಂದ ರಸ್ತೆಗಳೇ ಮಾಯಯಾಗಿದ್ದರೆ, ಇನ್ನು ಕೆಲವೆಡೆ ತೋಟಕ್ಕೆಲ್ಲಾ ನೀರು ತುಂಬಿದೆ. ಇನ್ನಷ್ಟು ಕಡೆ ಮನೆ ಕುಸಿತ, ಗುಡ್ಡ ಕುಸಿತದ ಸುದ್ದಿಗಳೇ ಬರುತ್ತಿವೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದಲ್ಲಿ ಮನೆ ಕುಸಿದಿದೆ. ಮನೆಯಲ್ಲಿದ್ದವರಿಗೆ ಅದೃಷ್ಟವಶಾತ್ ಏನು ಆಗಿಲ್ಲ. ಆದರೆ ಮನೆಯಲ್ಲಿದ್ದ ತುಂಬು ಗರ್ಭಿಣಿ ದಾರಿ ಕಾಣದೆ ಕುಸಿದು ಮನೆಯನ್ನೇ ನೋಡುತ್ತಾ ಕುಳಿತಿದ್ದಾರೆ. ಇನ್ನು ಸಾತ್ನಳ್ಳಿ ಹಳ್ಳ ತುಂಬಿ ಹರಿಯುತ್ತಿದ್ದು, ಮಕ್ಕಳನ್ನು ಶಾಲೆಗೆ ಬಿಡಲು ಪೋಷಕರು ಪರದಾಡುತ್ತಿದ್ದಾರೆ.

ಇನ್ನು ಚಿಕ್ಕಮಗಳೂರಿನಲ್ಲೂ ಮಳೆಯ ಅಬ್ಬರ ಜೋರಾಗಿದ್ದು ಎಲ್ಲಾ‌ಕಡೆ ನೀರು ಹರಿಯುತ್ತಿದೆ. ಹಳ್ಳಕೊಳ್ಳಗಳು ತುಂಬಿವೆ. ಕಳಸ ರಸ್ತೆಯಂತು ನೀರಿನಿಂದ ತುಂಬಿ ಹರಿಯುತ್ತಿದ್ದು, ರಸ್ತೆಯೇ ಕಾಣದಂತೆ ಆಗಿದೆ.

ಚಿಕ್ಕಬಳ್ಳಾಪುರದಲ್ಲೂ ಮಳೆಯ ಅಬ್ಬರ ಜೋರಾಗಿದ್ದು, ತೋಟ ಗದ್ದೆಗಳಲ್ಲೆಲ್ಲಾ ನೀರು ತುಂಬಿದೆ. ಬೆಳೆ ಹಾಳಾಗುವ ಭೀತಿಯಲ್ಲಿದ್ದಾರೆ ರೈತರು‌. ಮಂಗಳೂರು ಭಾಗದಲ್ಲೂ ಮಳೆಯಿಂದಾಗಿ ತೋಟಗಳಿಗೆ ನೀರು ತುಂಬಿದೆ. ಬೆಳೆಯೆಲ್ಲಾ ನಾಶವಾಗುವ ಭಯ ರೈತರಿಗೆ ಕಾಡುತ್ತಿದೆ.

ಇನ್ನು ಉತ್ತರ ಕನ್ನಡದ ಅಂಕೋಲ ಭಾಗದಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತವಾಗುತ್ತಿದೆ. ಇನ್ನು ಕೆಲವೊಂದು ಕಡೆಗಳಲ್ಲಿ ಗುಡ್ಡ ಕುಸಿತ ನಿಂತಿಲ್ಲ. ರಸ್ತೆಯಲ್ಲಿ ಓಡಾಡುವ ವಾಹನಗಳಿಗೂ ಭಯವಾಗಿದೆ. ಕೆಲವೊಂದು ಕಡೆ ಮಳೆ ನಿಲ್ಲುತ್ತಿಲ್ಲ. ರಾಜ್ಯದ ಹಲವೆಡೆ ಜೋರು ಮಳೆಯಾಗುತ್ತಿದೆ. ಕೊಡಗು ಭಾಗದಲ್ಲೂ ಮಳೆಯ ಆರ್ಭಟ ನಿಲ್ಲುತ್ತಿಲ್ಲ. ಹೀಗಾಗಿ ಕೊಡಗು ಹಾಗೂ ಮಂಗಳೂರು ಭಾಗದಲ್ಲಿ ಮಳೆ ಜೋರಾಗಿದ್ದು ಶಾಲೆಗಳಿಗೂ ರಜೆ ನೀಡಲಾಗಿದೆ. ಹೊರಗೆ ಹೋಗುವ ಜನರಿಗೂ ಎಚ್ಚರಿಕೆ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!