Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಳೆ ಅವಾಂತರ.. ಯಾವೆಲ್ಲಾ ಜಿಲ್ಲೆಯಲ್ಲಿ ಹೇಗಿದೆ ಪರಿಸ್ಥಿತಿ..?

---Advertisement---

ಬೆಂಗಳೂರು: ರಾಜ್ಯದೆಲ್ಲೆಡೆ ಮಳೆಯ ಅಬ್ಬರ ಜೋರಾಗಿದೆ. ಬೆಂಬಿಡದೆ ಸುರಿಯುತ್ತಿರುವ ಮಳೆಗೆ ಜನ ನಿತ್ರಾಣರಾಗಿದ್ದಾರೆ. ಎಷ್ಟೋ ಜಿಲ್ಲೆಯಲ್ಲಿ ಮಳೆಯಿಂದ ರಸ್ತೆಗಳೇ ಮಾಯಯಾಗಿದ್ದರೆ, ಇನ್ನು ಕೆಲವೆಡೆ ತೋಟಕ್ಕೆಲ್ಲಾ ನೀರು ತುಂಬಿದೆ. ಇನ್ನಷ್ಟು ಕಡೆ ಮನೆ ಕುಸಿತ, ಗುಡ್ಡ ಕುಸಿತದ ಸುದ್ದಿಗಳೇ ಬರುತ್ತಿವೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದಲ್ಲಿ ಮನೆ ಕುಸಿದಿದೆ. ಮನೆಯಲ್ಲಿದ್ದವರಿಗೆ ಅದೃಷ್ಟವಶಾತ್ ಏನು ಆಗಿಲ್ಲ. ಆದರೆ ಮನೆಯಲ್ಲಿದ್ದ ತುಂಬು ಗರ್ಭಿಣಿ ದಾರಿ ಕಾಣದೆ ಕುಸಿದು ಮನೆಯನ್ನೇ ನೋಡುತ್ತಾ ಕುಳಿತಿದ್ದಾರೆ. ಇನ್ನು ಸಾತ್ನಳ್ಳಿ ಹಳ್ಳ ತುಂಬಿ ಹರಿಯುತ್ತಿದ್ದು, ಮಕ್ಕಳನ್ನು ಶಾಲೆಗೆ ಬಿಡಲು ಪೋಷಕರು ಪರದಾಡುತ್ತಿದ್ದಾರೆ.

ಇನ್ನು ಚಿಕ್ಕಮಗಳೂರಿನಲ್ಲೂ ಮಳೆಯ ಅಬ್ಬರ ಜೋರಾಗಿದ್ದು ಎಲ್ಲಾ‌ಕಡೆ ನೀರು ಹರಿಯುತ್ತಿದೆ. ಹಳ್ಳಕೊಳ್ಳಗಳು ತುಂಬಿವೆ. ಕಳಸ ರಸ್ತೆಯಂತು ನೀರಿನಿಂದ ತುಂಬಿ ಹರಿಯುತ್ತಿದ್ದು, ರಸ್ತೆಯೇ ಕಾಣದಂತೆ ಆಗಿದೆ.

ಚಿಕ್ಕಬಳ್ಳಾಪುರದಲ್ಲೂ ಮಳೆಯ ಅಬ್ಬರ ಜೋರಾಗಿದ್ದು, ತೋಟ ಗದ್ದೆಗಳಲ್ಲೆಲ್ಲಾ ನೀರು ತುಂಬಿದೆ. ಬೆಳೆ ಹಾಳಾಗುವ ಭೀತಿಯಲ್ಲಿದ್ದಾರೆ ರೈತರು‌. ಮಂಗಳೂರು ಭಾಗದಲ್ಲೂ ಮಳೆಯಿಂದಾಗಿ ತೋಟಗಳಿಗೆ ನೀರು ತುಂಬಿದೆ. ಬೆಳೆಯೆಲ್ಲಾ ನಾಶವಾಗುವ ಭಯ ರೈತರಿಗೆ ಕಾಡುತ್ತಿದೆ.

ಇನ್ನು ಉತ್ತರ ಕನ್ನಡದ ಅಂಕೋಲ ಭಾಗದಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತವಾಗುತ್ತಿದೆ. ಇನ್ನು ಕೆಲವೊಂದು ಕಡೆಗಳಲ್ಲಿ ಗುಡ್ಡ ಕುಸಿತ ನಿಂತಿಲ್ಲ. ರಸ್ತೆಯಲ್ಲಿ ಓಡಾಡುವ ವಾಹನಗಳಿಗೂ ಭಯವಾಗಿದೆ. ಕೆಲವೊಂದು ಕಡೆ ಮಳೆ ನಿಲ್ಲುತ್ತಿಲ್ಲ. ರಾಜ್ಯದ ಹಲವೆಡೆ ಜೋರು ಮಳೆಯಾಗುತ್ತಿದೆ. ಕೊಡಗು ಭಾಗದಲ್ಲೂ ಮಳೆಯ ಆರ್ಭಟ ನಿಲ್ಲುತ್ತಿಲ್ಲ. ಹೀಗಾಗಿ ಕೊಡಗು ಹಾಗೂ ಮಂಗಳೂರು ಭಾಗದಲ್ಲಿ ಮಳೆ ಜೋರಾಗಿದ್ದು ಶಾಲೆಗಳಿಗೂ ರಜೆ ನೀಡಲಾಗಿದೆ. ಹೊರಗೆ ಹೋಗುವ ಜನರಿಗೂ ಎಚ್ಚರಿಕೆ ನೀಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment