Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

---Advertisement---

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ ಹವಮಾನ ಇಲಾಖೆ.

ಏಪ್ರಿಲ್ 29 ರಿಂದ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ತುಮಕೂರು, ಮೈಸೂರು,ಹಾಸನದಲ್ಲಿ ಮಳೆಯಾಗಲಿದೆ. ಹೀಗಾಗಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಮೇ 1ರಿಂದ ಮಳೆಯಾಗುವ ಸಾಧ್ಯತೆ ಇದೆ.

ಸದ್ಯ ರಾಜ್ಯಾದ್ಯಂತ ಉಷ್ಣಾಂಶ ಜಾಸ್ತಿಯಾಗುತ್ತಿದೆ. ದಿನೇ ದಿನೇ ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ಜನ ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಆದರೂ ಡಿಹೈಡ್ರೇಷನ್ ಸಮಸ್ಯೆಯಿಂದ ಸಾಕಷ್ಟು ಜನ ಬಳಲುತ್ತಿದ್ದಾರೆ. ಇದರ ನಡುವೆ ಮಕ್ಕಳಿಗೆ ಬೇಸಿಗೆ ರಜೆ ಬೇರೆ ಇದೆ. ಹೀಗಾಗಿ ಮಕ್ಕಳನ್ನು ಈ ಉರಿ ಬಿಸಿಲಿನಿಂದ ಕಾಪಾಡಿಕೊಳ್ಳುವುದೇ ಪೋಷಕರಿಗೆ ದೊಡ್ಡ ಸವಾಲಾಗಿದೆ‌. ಬೇಸಿಗೆ ಕಾಲವೇ ಬೇಗ ಮರೆಯಾಗಲಿ ಎಂದು ಎಲ್ಲರೂ ಬೇಡಿಕೊಳ್ಳುತ್ತಿದ್ದಾರೆ.

ಉಷ್ಣಾಂಶದ ಹೆಚ್ಚಳಕ್ಕೆ ಬೆಂದು ಹೋಗುತ್ತಿರುವ ಜನ ಒಂದು ಕಡೆಯಾದರೆ, ಜಾನುವಾರುಗಳ ಪರಿಸ್ಥಿತಿಯೂ ಕೆಟ್ಟದಾಗಿಯೇ ಇದೆ. ಸರಿಯಾಗಿ ನೀರು ಸಿಗದೆ, ಹಸಿ ಮೇವು ಸಿಗದೆ ಪ್ರಾಣಿಗಳು ಕೂಡ ಸಂಕಟ ಪಡುತ್ತಿವೆ. ಹೀಗಾಗಿ ಬೇಗ ಮಳೆ ಬಂದರೆ ಜನರಿಗೆ ಮಾತ್ರವಲ್ಲ ಜಾನುವಾರುಗಳಿಗೂ ನೆಮ್ಮದಿಯೇ ಸರಿ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...