Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

Facebook
Twitter
Telegram
WhatsApp

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ ಹವಮಾನ ಇಲಾಖೆ.

ಏಪ್ರಿಲ್ 29 ರಿಂದ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ತುಮಕೂರು, ಮೈಸೂರು,ಹಾಸನದಲ್ಲಿ ಮಳೆಯಾಗಲಿದೆ. ಹೀಗಾಗಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಮೇ 1ರಿಂದ ಮಳೆಯಾಗುವ ಸಾಧ್ಯತೆ ಇದೆ.

ಸದ್ಯ ರಾಜ್ಯಾದ್ಯಂತ ಉಷ್ಣಾಂಶ ಜಾಸ್ತಿಯಾಗುತ್ತಿದೆ. ದಿನೇ ದಿನೇ ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ಜನ ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಆದರೂ ಡಿಹೈಡ್ರೇಷನ್ ಸಮಸ್ಯೆಯಿಂದ ಸಾಕಷ್ಟು ಜನ ಬಳಲುತ್ತಿದ್ದಾರೆ. ಇದರ ನಡುವೆ ಮಕ್ಕಳಿಗೆ ಬೇಸಿಗೆ ರಜೆ ಬೇರೆ ಇದೆ. ಹೀಗಾಗಿ ಮಕ್ಕಳನ್ನು ಈ ಉರಿ ಬಿಸಿಲಿನಿಂದ ಕಾಪಾಡಿಕೊಳ್ಳುವುದೇ ಪೋಷಕರಿಗೆ ದೊಡ್ಡ ಸವಾಲಾಗಿದೆ‌. ಬೇಸಿಗೆ ಕಾಲವೇ ಬೇಗ ಮರೆಯಾಗಲಿ ಎಂದು ಎಲ್ಲರೂ ಬೇಡಿಕೊಳ್ಳುತ್ತಿದ್ದಾರೆ.

ಉಷ್ಣಾಂಶದ ಹೆಚ್ಚಳಕ್ಕೆ ಬೆಂದು ಹೋಗುತ್ತಿರುವ ಜನ ಒಂದು ಕಡೆಯಾದರೆ, ಜಾನುವಾರುಗಳ ಪರಿಸ್ಥಿತಿಯೂ ಕೆಟ್ಟದಾಗಿಯೇ ಇದೆ. ಸರಿಯಾಗಿ ನೀರು ಸಿಗದೆ, ಹಸಿ ಮೇವು ಸಿಗದೆ ಪ್ರಾಣಿಗಳು ಕೂಡ ಸಂಕಟ ಪಡುತ್ತಿವೆ. ಹೀಗಾಗಿ ಬೇಗ ಮಳೆ ಬಂದರೆ ಜನರಿಗೆ ಮಾತ್ರವಲ್ಲ ಜಾನುವಾರುಗಳಿಗೂ ನೆಮ್ಮದಿಯೇ ಸರಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಟಿ ರವಿಯವರು ರಾಜ್ಯದ ಕ್ಷೌರಿಕ ಕ್ಷಮೆ ಕೇಳಬೇಕು : ಎನ್.ಡಿ.ಕುಮಾರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಯಲ್ಲಾಪುರಲ್ಲಿ ಇತ್ತೀಚಿಗೆ ನಡೆದ ರಾಜಕೀಯ ಸಭೆ ಒಂದರಲ್ಲಿ ಮಾಜಿ ಸಚಿವ ಸಿಟಿ ರವಿಯವರು

ಬೆಂಗಳೂರಿನಲ್ಲಿ ಇಂದು ಜೋರು ಮಳೆ : ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ

ಕಳೆದ ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಜನಕ್ಕೆ ಮಳೆಯ ಅನುಭವವಾಗಿತ್ತು. ಬಿಸ ಬಿಸಿಯಾಗಿದ್ದ ಭೂಮಿಗೆ ಮಳೆರಾಯ ತಂಪೆರೆದು ಹೋಗಿದ್ದ. ಮತ್ತೆ ನಿನ್ನೆಯೆಲ್ಲಾ ಅದೇ ಬಿಸಿಬಿಸಿ ಅನುಭವ. ಇದೀಗ ಇಂದು ಸಿಲಿಕಾನ್ ಸಿಟಿ ಮತ್ತೆ ತಂಪಾಗಿದೆ‌.

ದಾವಣಗೆರೆ ಲೋಕಸಭಾ ಕ್ಷೇತ್ರದ ಕಣದಲ್ಲಿ 30 ಅಭ್ಯರ್ಥಿಗಳು  : 7 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಚುನಾವಣೆಯ ಮತದಾರರ ಸಂಪೂರ್ಣ ಮಾಹಿತಿ….!

ದಾವಣಗೆರೆ.ಮೇ.5 : ದಾವಣಗೆರೆ ಲೋಕಸಭಾ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದು ಎಲ್ಲಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆಗಳನ್ನು ಹೊತ್ತ

error: Content is protected !!