Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂದಿನ 2 ದಿನ ಬಾರಿ ಮಳೆ : ಶಿವಮೊಗ್ಗ.. ಚಿಕ್ಕಮಗಳೂರಿಗೆ ಯೆಲ್ಲೋ ಅಲರ್ಟ್..!

---Advertisement---

 

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಅಬ್ಬರ ನಿಲ್ಲುತ್ತಿಲ್ಲ. ಮಳೆಯಿಂದಾಗಿ ಜನ ಸಂಕಷ್ಟಕ್ಕೆ ಈಡಾಗುತ್ತಿದ್ದಾರೆ. ದಿನೇ ದಿನೇ ಹಲವು ಕಡೆಗಳಲ್ಲಿ ಮಣ್ಣು ಕುಸಿತದ ಪ್ರಕರಣಗಳು ನಡೆಯುತ್ತಿವೆ. ಇದರಿಂದ ರಸ್ತೆ ಸಂಪರ್ಕಗಳು ಕಡಿತಗೊಳ್ಳುತ್ತಿವೆ. ಮುಂದಿನ ಎರಡು ದಿನ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.

ಜೂನ್ 31ರವರೆಗೂ ರಾಜ್ಯದಲ್ಲಿ ಬಾರೀ ಮಳೆಯಾಗಲಿದೆ. ಅದರಲ್ಲೂ ಮುಂದಿನ ಎರಡು ದಿನಗಳ ಕಾಲ ಕರಾವಳಿ, ಉಡುಪಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ. ಎರಡು ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಜೋರು ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಮಳೆಯ ಮುನ್ಸೂಚನೆ ಇದ್ದು ಮೀನುಗಾರರು ನದಿಗೆ ಇಳಿಯದಂತೆ ಸೂಚನೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಗುಡ್ಡ ಕುಸಿತದಿಂದಾನೇ ಸಾಕಷ್ಟು ಸಾವು ನೋವು ಸಂಭವಿಸಿದೆ. ಹೀಗಿರುವಾಗ ಮತ್ತೆ ಮಳೆ, ಗಾಳಿ ಮುಂದುವರೆದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಗಾಳಿಯ ವೇಗವು 30-40 ಕಿಲೋ ಮೀಟರ್ ತಲುಪುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ಬೆಳಗ್ಗೆಯಿಂದಾನೆ ತಂಡಿ ಇದ್ದು, ಮೋಡ ಕವಿದ ವಾತಾವರಣವಿದೆ. ಹೀಗಾಗಿ ಸಂಜೆ ವೇಳೆಗೆ ಜೋರು ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.

ಹಾಸನದ ಸಕಲೇಶಪುರದಲ್ಲಿ ರಸ್ತೆಯೇ ಕುಸಿದು ಆತಂಕ ಸೃಷ್ಟಿಸಿದೆ. ಸಕಲೇಶಪುರದ ಹಲವೆಡೆ ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ರಸ್ತೆಗಳು ಕೊಚ್ಚಿ ಹೋಗಿ, ಜನರ ಓಡಾಟಕ್ಕೆ ತೊಂದರೆಯಾಗಿದೆ. ಇನ್ನು ಕೆಲವೆಡೆ ಶಾಲಾ ಕಾಲೇಜಿಗೆ ರಜೆ ಕೂಡ ನೀಡಿಲ್ಲ. ಮಳೆಯ ನೀರಿನಲ್ಲಿಯೇ ನೆನೆದುಕೊಂಡು ಶಾಲೆಗೆ ಮಕ್ಕಳು ಹೋಗುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment