ಬೆಂಗಳೂರು: ಏಪ್ರಿಲ್ ತಿಂಗಳಲ್ಲಂತೂ ಬಿಸಿಲಿನ ತಾಪ ಜನರಿಂದ ಸಹಿಸೋದಕ್ಕೆ ಸಾಧ್ಯವಾಗ್ತಿಲ್ಲ. ತಜ್ಞರು ಕೂಡ ಈ ಸಂಬಂಧ ಎಚ್ಚರಿಕೆಯನ್ನ ನೀಡಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೂ ಹೊರಗೆ ಬರುವುದಕ್ಕೆ ಹೋಗಬೇಡಿ ಎಂಬ ಸಲಹೆಯನ್ನ ತಿಳಿಸಿದ್ದಾರೆ. ತಾಪಮಾನ ಜಾಸ್ತಿ ಇದ್ದಾಗ ಆ ಬಿಸಿಲಿಗೆ ತಲೆ ಸುತ್ತಿ ಬೀಳುವ ಸಾಧ್ಯತೆಗಳು ಇರುತ್ತವೆ.
ಹವಮಾನ ಇಲಾಖೆ ಈ ಸಂಬಂಧ ಎಚ್ಚರಿಕೆಯನ್ನ ನೀಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಏಪ್ರಿಲ್ 15 ರಿಂದ ಏಪ್ರಿಲ್ 18ರವರೆಗೂ ಉಷ್ಣ ಅಲೆಗಳು ಬರುವ ಸಾಧ್ಯತೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಸುಮಾರು 37 ರಿಂದ 38 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯೂ ಇದೆ. ಈ ಹೀಟ್ ವೇವ್ ಜೊತೆಗೆ ಮಳೆಯಾಗುವ ಸಾಧ್ಯತೆಯೂ ಇದೆ. ಉತ್ತರ ಒಳನಾಡಿನಲ್ಲಿ ಟಫ್ ಇರುವುದರ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಏಪ್ರಿಲ್ 15 ರಂದು ಬೆಂಗಳೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಪ್ಪಳ, ಗದಗ, ಹಾವೇರು, ಧಾರವಾಡ, ಬಾಗಲಕೋಟೆ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹಾಗೇ ಏಪ್ರಿಲ್ 16ರಂದು ಮಂಡ್ಯ, ಮೈಸೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾವೇರಿ, ಉತ್ತರ ಕನ್ನಡ, ಧಾರವಾಡ ಭಾಗದಲ್ಲಿ ಮಳೆಯಾಗಲಿದೆ. ಆದರೆ ಬಿಸಿಲಿನ ತಾಪಮಾನ ಹೆಚ್ಚಾವಿರುವ ಕಾರಣ ಹೊರಗೆ ಹೋಗುವವರು ಸ್ವಲ್ಪ ಎಚ್ಚರಿಕೆಯಿಂದ ಇದ್ದರೆ ಬಹಳ ಉತ್ತಮ. ಇಲ್ಲಂದ್ರೆ ಅನಾರೋಗ್ಯಕ್ಕೆ ದಾರಿ ಮಾಡಿಕೊಟ್ಟಂತೆ ಆಗುತ್ತೆ.













