Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗ.. ಚಿಕ್ಕಮಗಳೂರು ಸೇರಿದಂತೆ ಇಂದು ಹಲವೆಡೆ ಮಳೆ : ಹೇಗಿದೆ ಹವಮಾನ ವರದಿ..?

---Advertisement---

ಬೆಂಗಳೂರು: ಭೂಮಿಯ ಮೇಲಿನ ವಾತಾವರಣವಂತೂ ನಿರೀಕ್ಷೆಯನ್ನೇ ಮಾಡದ ರೀತಿ ಬದಲಾಗುತ್ತಿದೆ. ಈಗಾಗಲೇ ಹಿಂಗಾರು ಮಳೆ ಮುಗಿದಿದೆ. ಚಳಿಗಾಲ ಆರಂಭವಾಗಿದೆ. ಈ ಚಳಿಗಾಲದ ಸಮಯದಲ್ಲಿ ಬೆಳೆಗಳ ಕೊಯ್ಲಿನ ಕಡೆಗೆ ರೈತರು ಹೆಚ್ಚು ಗಮನ ನೀಡುತ್ತಾರೆ. ಆದರೆ ಈಗ ಮಳೆ ಬರುತ್ತಿರುವುದು ರೈತರಿಗೂ ಸಂಕಷ್ಟ ತಂದೊಡ್ಡಿದೆ.

ಇಂದಿನಿಂದ ರಾಜ್ಯದಲ್ಲಿ ಮಳೆಯಾಗಲಿದ್ದು, ನವೆಂಬರ್ 25ರವರೆಗೂ ಮಳೆ ಮುಂದುವರೆಯಲಿದೆ. ಅಲ್ಲಿ ಸ್ವಲ್ಪ ಗ್ಯಾಪ್ ಕೊಟ್ಟು ಡಿಸೆಂಬರ್ 3ರವರೆಗೂ ಮತ್ತೆ ಮಳೆಯಾಗಲಿದೆ. ಕೆಲವೊಂದು ಭಾಗದಲ್ಲಿ ಅದರಲ್ಲೂ ತುಮಕೂರು ಭಾಗದ ಜನ ರಾಗಿ ಬೆಳೆಯನ್ನೇ ಹೆಚ್ಚು ಬೆಳೆದಿದ್ದಾರೆ. ಹೊಲವೆಲ್ಲ ಒಣಗಿ ನಿಂತಿದೆ. ಹೀಗಿರುವಾಗ ಮಳೆ ಬಂದರೆ ರಾಗಿಯ ಕೊಯ್ಲು ಮಾಡುವುದೇಗೆ ಎಂಬ ಆತಂಕ ರೈತರದ್ದಾಗಿದೆ.

ಹವಮಾನ ಇಲಾಖೆ ಕೊಟ್ಟ ಮುನ್ಸೂಚನೆ ಪ್ರಕಾರ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಆರ್ಭಟ ಇರಲಿದೆ. ಕರಾವಳಿಯ ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ‌. ಬೆಂಗಳೂರಿನಲ್ಲಿ ಈಗಾಗಲೇ ಮೋಡ ಕವಿದ ವಾತಾವರಣವಿದೆ. ಇನ್ನು ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣವೇ ಮುಂದುವರೆಯಲಿದೆ. ಜೊತೆಗೆ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಅವಧಿಯಲ್ಲಿ ಗರಿಷ್ಠ ತಾಪಮಾನವೂ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಳಿದಂತೆ ಇನ್ನೆರಡು ದಿನಗಳಲ್ಲಿ ರಾಜ್ಯದ ಹವಮಾನದಲ್ಲಿ ಮಹತ್ವದ ಬದಲಾವಣೆಗಳು ಇಲ್ಲ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment