Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ : ನಾಳೆ ಪಂದ್ಯ ಹೇಗೆ ನಡೆಯುತ್ತದೆ ? ಇಲ್ಲಿದೆ ವಿವರಗಳು…!

Facebook
Twitter
Telegram
WhatsApp

 

 

ASIA CUP 2023:  ಏಷ್ಯಾ ಕಪ್ 2023ರ ಸೂಪರ್-4 ಕದನದ ಭಾಗವಾಗಿ ಭಾರತ-ಪಾಕಿಸ್ತಾನ ಪಂದ್ಯವು ಮೀಸಲು ದಿನಕ್ಕೆ ಹೋಗಿದೆ. ಮಳೆಯಿಂದಾಗಿ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗಿದೆ ಎಂದು ಅಂಪೈರ್‌ಗಳು ಘೋಷಿಸಿದ್ದಾರೆ. ರಿಸರ್ವ್ ಡೇ ಪಂದ್ಯ ಹೇಗೆ ಮುಂದುವರಿಯುತ್ತದೆ ?  ಇಲ್ಲಿದೆ ವಿವರಗಳು…

 

ಭಾರತ-ಪಾಕ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿ ಪಂದ್ಯ ನಿಂತಿದೆ.
ಏಷ್ಯಾಕಪ್ 2023ರ ಸೂಪರ್ 4 ಭಾಗವಾಗಿ ಶ್ರೀಲಂಕಾದ ಕೊಲಂಬೊದಲ್ಲಿ ಪಂದ್ಯ ನಡೆಯುತ್ತಿದೆ. ಮಳೆಯಿಂದಾಗಿ ಮೈದಾನದಲ್ಲಿ ನೀರು ತುಂಬಿರುವ ಕಾರಣ ಪಂದ್ಯವನ್ನು ಸೋಮವಾರಕ್ಕೆ ಮುಂದೂಡುವುದಾಗಿ ಅಂಪೈರ್‌ಗಳು ಘೋಷಿಸಿದರು.

ಇಂದು ಪಂದ್ಯವನ್ನು ನಿಲ್ಲಿಸಿದ 24.1 ಓವರ್‌ನಿಂದ ಸೋಮವಾರ ಭಾರತದ ಇನ್ನಿಂಗ್ಸ್ ಮುಂದುವರಿಯುತ್ತದೆ.  ಸದ್ಯ ಭಾರತ 2 ವಿಕೆಟ್ ಕಳೆದುಕೊಂಡು 147 ರನ್ ಗಳಿಸಿದೆ. ವಿರಾಟ್ ಕೊಹ್ಲಿ (8*) ಮತ್ತು ಕೆಎಲ್ ರಾಹುಲ್ (17*) ಮೈದಾನದಲ್ಲಿ  ಮುಂದುವರಿದಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 24.1 ನೇ ಓವರ್ ಸಮಯದಲ್ಲಿ ಮಳೆ ಸುರಿಯಿತು. ಭಾರೀ ಮಳೆಯ ನಂತರ ಆಟಗಾರರು ಡ್ರೆಸ್ಸಿಂಗ್ ರೂಮ್‌ಗೆ ತೆರಳಿದರು. ಒಂದು ಹಂತದಲ್ಲಿ ಮಳೆ ಕಡಿಮೆಯಾಗುತ್ತಿದ್ದಂತೆ ಅಂಪೈರ್‌ಗಳು ರಾತ್ರಿ 9 ಗಂಟೆಗೆ ಪಂದ್ಯ ಆರಂಭಿಸಲು ತೀರ್ಮಾನಿಸಿದರು. ಆದರೆ ಮತ್ತೆ ಮಳೆ ಸುರಿದ ಕಾರಣ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಯಿತು.

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಭಾರತಕ್ಕೆ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಉತ್ತಮ ಆರಂಭ ನೀಡಿದರು. ಎರಡು ಬೌಂಡರಿ ಹಾಗೂ ಸಿಕ್ಸರ್‌ಗಳಿಂದ ಪೈಪೋಟಿ ಏರ್ಪಟ್ಟಿದ್ದರಿಂದ ಸ್ಕೋರ್ ಬೋರ್ಡ್ 14 ಓವರ್‌ಗಳಲ್ಲಿ ರನ್ ಗಳು ನೂರರ ಗಡಿ ದಾಟಿತು. ಆರಂಭಿಕರಿಬ್ಬರೂ ಅರ್ಧಶತಕ ಗಳಿಸಿದರು. ರೋಹಿತ್ ಶರ್ಮಾ (56) ಮತ್ತು ಶುಭಮನ್ ಗಿಲ್ (58) ರನೌಟ್ ಆದರು.

ಭಾರತದ ಪ್ರಸ್ತುತ ಸ್ಕೋರ್ 147/2. ವಿರಾಟ್ ಕೊಹ್ಲಿ (8) ಮತ್ತು ಕೆಎಲ್ ರಾಹುಲ್ (17) ಕ್ರೀಸ್‌ನಲ್ಲಿದ್ದಾರೆ. ನಾಳೆ ಪಂದ್ಯ 24.2 ಓವರ್‌ನಿಂದ ಆರಂಭವಾಗಲಿದೆ. ಒಟ್ಟು 50 ಓವರ್‌ಗಳಲ್ಲಿ ಪಂದ್ಯ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!