Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮತ್ತೆ ಶುರುವಾಗಲಿದೆ ಮಳೆಯ ಅಬ್ಬರ: ಚಿತ್ರದುರ್ಗ ಸೇರಿ ಎಲ್ಲೆಲ್ಲಾ ಮಳೆಯಾಗಲಿದೆ..?

---Advertisement---

ಬೆಂಗಳೂರು: ಈಚೆಗಷ್ಟೇ ಮಳೆಯ ಅಬ್ಬರ ರಾಜ್ಯದಲ್ಲಿ ತಗ್ಗಿದೆ. ಒಂದೇ ಸಮನೆ ಸುರಿದು ಕೊಂಚ ವಿಶ್ರಾಂತಿ ಪಡೆದುಕೊಂಡಿರುವ ವರುಣರಾಯ, ಮತ್ತೆ ದರ್ಶನ ಭಾಗ್ಯ ನೀಡಲು ಸಜ್ಜಾಗಿದ್ದಾನೆ. ನವೆಂಬರ್ 16ರವರೆಗೂ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಬಾರೀ ಮಳೆಯಾದರೆ ಇನ್ನು ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಹೀಗಾಗಿ ಹವಮಾನ ಇಲಾಖೆ ಹಳದಿ ಅಲರ್ಟ್ ಅನ್ನು ನೀಡಿದೆ.

ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ. ಕನಿಷ್ಠ 70-110 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹಾಗೇ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ, ಬೀದರ್, ಕೊಪ್ಪಳ, ಕಲಬುರಗಿ, ಬೀದರ್, ರಾಯಚೂರು, ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇನ್ನು ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಭಾಗದಲ್ಲಿ ಲಘು ಮಳೆಯಾಗಲಿದೆ. ಈಗಾಗಲೇ ಈ ಭಾಗಗಳಲ್ಲಿ ಚಳಿಯ ವಾತಾವರಣ ಜೋರಾಗಿದೆ. ಜೊತೆಗೆ ಬೆಳೆ ಕೊಯ್ಲಿನ ಕಡೆಗೆ ಈ ಭಾಗದ ರೈತರು ಗಮನ ಕೊಟ್ಟಿದ್ದಾರೆ. ಹಿಂಗಾರು ಮಳೆ ಬಿಡುವು ಕೊಟ್ಟಿರುವ ಕಾರಣ ಹೆಸರು, ಮೆಕ್ಕೆಜೋಳ, ಬೆಂಡೆ ಸೇರಿದಂತೆ ಹಲವು ಬೆಳೆಗಳ ಕೊಯ್ಲು ಮಾಡುತ್ತಿದ್ದಾರೆ. ಹೀಗಿರುವಾಗ ಮತ್ತೆ ಮಳೆ ಬಂದರೆ ಕೊಯ್ಲಿಗೆ ಬಂದ ಬೆಳೆಯೆಲ್ಲಾ ಹಾಳಾಗುವ ಭಯ ರೈತರದ್ದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...