Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಮಳೆ : ಆರೆಂಜ್ ಅಲರ್ಟ್ ಘೋಷಣೆ..!

---Advertisement---

ಬೆಂಗಳೂರು: ದಸರಾ ಹಬ್ಬಕ್ಕೆಂದು ಮೂರ್ನಾಲ್ಕು ದಿನಗಳ ಕಾಲ ಊರು ಸೇರಿದ್ದವರಿಗೆ ಇಂದು ಬೆಳಗ್ಗೆಯಿಂದ ಟ್ರಾಫಿಕ್ ಕಿರಿಕಿರಿ, ಮಳೆಯ ಸಮಸ್ಯೆಯೇ ತಲೆದೂರಿದೆ. ಬೆಳಗ್ಗೆಯಿಂದಾನೂ ಕೆಲ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಇದರಿಂದ ಹೊರಗೆ ಹೋಗುವ ಜನರಿಗೆ ಜಿಟಿಜಿಟಿ ಮಳೆ ಅಡ್ಡಿಯಾಗುತ್ತಿದೆ. ಬೆಳಗ್ಗೆನೆ ಎಲ್ಲೆಡೆ ಕಲರ್ ಫುಲ್ ಕೊಡೆಗಳ ದರ್ಶನವೇ ಆಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ರಜೆ ಇದ್ದಿದ್ದರಿಂದ ಊರುಗಳಿಗೆ ತೆರಳಿದ್ದವರು ನಿನ್ನೆ ಸಂಜೆಯಿಂದಾನೂ ಪ್ರಯಾಣ ಮಾಡುತ್ತಲೇ ಇದ್ದಾರೆ. ಹೀಗಾಗಿ ಟ್ರಾಫಿಕ್ ನಲ್ಲಿ ಸಿಲುಕಿದವರು, ಗಾಡಿಗಳು ಮೂವ್ ಆಗುವುದಕ್ಕೇನೆ ಕಷ್ಟಪಟ್ಟಿವೆ.

ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಘೋಷಣೆ ಮಾಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ‌ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಕ್ಟೋಬರ್17ರವರೆಗೂ ಕರಾವಳಿ ಹಾಗೂ ಕರಾವಳಿ ಜಿಲ್ಲೆಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚಿನ ಜೊತೆಗೆ ಜೋರಾದ ಮಳೆಯಾಗಲಿದೆ. ಹಾಗೇ ರಾಜ್ಯದ ದಕ್ಷಿಣ, ಉತ್ತರ ಒಳನಾಡು ಭಾಗದಲ್ಲಿ ಚದುರಿದ ಮಳೆಯಾಗಲಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದ್ದು, ಹಿರಗೆ ಹೋಗುವ ಜನರು ಎಚ್ಚರದಿಂದ ಇರಬೇಕು. ಆದರೆ ಈ ಸಮಯದಲ್ಲಿ ಮಳೆಯೇ ಹೆಚ್ಚು ಬೀಳುತ್ತಿರುವುದು ಕೆಲ ಭಾಗದ ರೈತರಿಗೆ ಸಂಕಷ್ಟ ಬಂದಂತೆ ಆಗಿದೆ‌. ಬೆಳೆ ಕೊಯ್ಲು ಕಟಾವಿಗೆ ಬಂದಿದ್ದು, ಮಳೆಯಿಂದಾಗಿ ಹಾಳಾಗುವ ಸಾಧ್ಯತೆ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...