Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

---Advertisement---

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ ದರ್ಶನ ನೀಡಿದ್ದಾನೆ.

ಮಧ್ಯಾಹ್ನದಿಂದಾನೂ ಮೋಡ ಕವಿದ ವಾತಾವರಣವಿತ್ತು. 2 ಗಂಟೆಯಾಗುತ್ತಲೇ ಸಣ್ಣಗೆ ಶುರುವಾದ ಮಳೆ, ತಣ್ಣನೆಯ ಗಾಳಿಯೊಂದಿಗೆ ನಿಲ್ಲದೆ ಸುರಿಯುತ್ತಿದೆ. ಇದರಿಂದ ಬೆಂಗಳೂರಿನ ಮಂದಿ ಫುಲ್ ಖುಷಿಯಾಗಿದ್ದಾರೆ.

ಪ್ರತಿ ಸಲ ಮಳೆ ಬಂದಾಗಲೂ ಜನ ಇಷ್ಟೊಂದು ಖುಷಿ ಪಟ್ಟಿದ್ದು ಕಂಡಿಲ್ಲ. ಆದರೆ ಈ ಬಾರಿಯ ಬಿಸಿಲಿಗೆ ತಡೆಯಲಾರದೆ ಮಳೆಗಾಗಿ‌ ಕಾಯುತ್ತಿದ್ದರು. ಮೊದಲ ಮಳೆಯಿಂದಾಗಿ ಜನ ಅದ್ಬುತ ಕಂಡಂತೆ ಫೀಲ್ ಮಾಡಿಕೊಳ್ಳುತ್ತಿದ್ದಾರೆ. ಇನ್ನು ನಾಲ್ಕೈದು ದಿನ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಹಲವೆಡೆ ಮಳೆ ಒಂದೇ ಸಮನೆ ಸುರಿಯುತ್ತಿದೆ. ಮೆಜೆಸ್ಟಿಕ್, ಟೌನ್ ಹಾಲ್, ಮಾರ್ಜೆಟ್, ಹೆಬ್ಬಾಳ, ರಾಜಾಜಿನಗರ, ವಿಜಯನಗರ ಸೇರಿದಂತೆ ನಗರದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಒಣ ಹವೆ ಕಡಿಮೆಯಾಗಿ ತಂಪಾದ ವಾತಾವರಣ ನಿರ್ಮಾಣವಾದರೆ ಸಾಕು ಎನ್ನುತ್ತಿದ್ದಾರೆ ಜನಗಳು. ಇಂದಿನಿಂದ ಮಳೆ ಶುರುವಾಗಿರುವುದರಿಂದ ಮಳೆ ಬರಲಿದೆ ಎಂಬ ನಂಬಿಕೆ ಉಂಟಾಗಿದೆ.

 

ಇದ್ದಕ್ಕಿದ್ದ ಹಾಗೇ ಮಳೆ ಬಂದ ಕಾರಣ ವಾಹನ ಸವಾರರು ಕೊಂಚ ತಬ್ಬಿಬ್ಬಾದರೂ. ಕೆಲವರು ಮಳೆಯಲ್ಲಿಯೇ ನೆನೆದುಕೊಂಡು, ಆ ಮಳೆಯ ಎಂಜಾಯ್ ಮಾಡಿಕೊಂಡು ಮುಂದೆ ಸಾಗಿದ್ದಾರೆ. ಇನ್ನು ಕೆಲವರು ಮಳೆಯಿಂದ ಒಂದು ಕಡೆ ನಿಂತು ಬಿಟ್ಟಿದ್ದಾರೆ. ಒಟ್ನಲ್ಲಿ ಬಿಸಿ ಬಿಸಿ ವಾತಾವರಣ ತಂಪಾಯ್ತಲ್ಲ, ಜನ ಫುಲ್ ಖುಷಿಯಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment