Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಾಳೆ ಶಿವಮೊಗ್ಗದಲ್ಲಿ ರೈತ ದಸರಾ : ಚಿತ್ರದುರ್ಗದ ಯುವ ರೈತ ಜ್ಞಾನೇಶ್ವರ ಕೆ.ಆರ್.ಉದ್ಘಾಟನೆ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.17 : ನಾಳೆ ಶಿವಮೊಗ್ಗದಲ್ಲಿ ನಡೆಯಲಿರುವ ರೈತ ದಸರಾವನ್ನು ಚಿತ್ರದುರ್ಗದ ಯುವ ರೈತ, ಸಾವಯವ ಕೃಷಿಕ
ಜ್ಞಾನೇಶ್ವರ ಕೆ.ಆರ್. ಅವರು ಉದ್ಗಾಟಿಸಲಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ, ರೈತ ದಸರಾ ಸಮಿತಿ-2023 ಕೃಷಿ ಹಾಗೂ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಉತ್ಪಾದಕರ ಸಂಘಗಳ ಒಕ್ಕೂಟ ಮಾಚೇನಹಳ್ಳಿ ಇವರ ಸಹಯೋಗದೊಂದಿಗೆ ಅಕ್ಟೋಬರ್ 18 ರ ಇಂದು ನಡೆಯುವ ರೈತ ದಸರಾದಲ್ಲಿ ಬೆಳಿಗ್ಗೆ 9 ಕ್ಕೆ ಶಿವಮೊಗ್ಗದ ಸರ್ಕಾರಿ ಪದವಿಪೂರ್ವ ಕಾಲೇಜು ಸೈನ್ಸ್ ಮೈದಾನದಲ್ಲಿ ಜಾಥಾ ಉದ್ಘಾಟನೆಗೊಂಡ ನಂತರ ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ರೈತ ಜ್ಞಾನೇಶ್ವರ ಅವರು ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿಯವರು. ಜಿಲ್ಲೆಯ ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಿದಗದಾರೆ. ಅವರ ತೋಟದಲ್ಲಿ ನಿಂಬೆ, ಹಲಸು, ಪಪ್ಪಾಯ, ದಾಳಿಂಬೆ, ಕರಿಬೇವು, ನುಗ್ಗೆ, ದಾಳಿಂಬೆ, ಮಾವು, ಬಾಳೆ ಮುಂತಾದ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ದೇಸಿ ತಳಿಯ ಹಸುಗಳನ್ನು ಸಾಕಿ ಹೈನುಗಾರಿಕೆ ಮಾಡಿರುವುದು, ಜೇನು ಸಾಕಾಣಿಕೆ, ಸಾವಯವ ಕೃಷಿ ಪದ್ಧತಿಯ ಬಗ್ಗೆ ಸಾಕಷ್ಟು ಆಸಕ್ತಿ ಹೊಂದಿದ್ದು ರೈತರನ್ನು  ಸಮಾನ ಮನಸ್ಕ 25 ರಿಂದ 30 ರೈತರು ಒಂದೆಡೆ ಸೇರಿ, ಚಿತ್ರದುರ್ಗದ ಜೆ.ಸಿ.ಆರ್. ಬಡಾವಣೆಯ ಬಳಿ ಪ್ರತಿ ಭಾನುವಾರ ಸಾವಯವ ಸಂತೆ ಮಾಡುವುದು, ಗುಣಮಟ್ಟದ ಬೆಳೆಗಳನ್ನು ನಿಗದಿತ ದರದಲ್ಲೇ ಮಾರಾಟ ಮಾಡುವ ಮೂಲಕ ರೈತರಿಗೆ ಪ್ರೇರಣೆಯಾಗಿದ್ದಾರೆ. ಮತ್ತು ಜಿಲ್ಲೆಯ ಪ್ರಗತಿಪರ ರೈತ, ಉದಯೋನ್ಮುಖ ಕೃಷಿ ಪಂಡಿತ, ರಾಜ್ಯ ಪ್ರಶಸ್ತಿ ವಿಜೇತ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಪ್ರಸ್ತುತ ಭಾರತೀಯ ಕಿಸಾನ್ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಶಿವಮೊಗ್ಗದಲ್ಲಿ ನಡೆಯುತ್ತಿರುವ ರೈತ ದಸರಾದಲ್ಲಿ ಕಾರ್ಯಕ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ನಮಗೆಲ್ಲಾ ಹೆಮ್ಮೆಯ ಸಂಗತಿ ಎಂದು ಅವರ ಸಹೋದರ ಕೆ.ಆರ್. ತಿಪ್ಪೇಸ್ವಾಮಿ, ಭಾರತೀಯ ಕಿಸಾನ್ ಸಂಘದ ಸದಸ್ಯರು ದೊಡ್ಡಸಿದ್ದವ್ವನಹಳ್ಳಿಯ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment