Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿನ್ನೆ ರಾತ್ರಿಯಷ್ಟೇ ರಿಲೀಸ್ ಆಗಿದ್ದ ರಜತ್, ವಿನಯ್ ಮತ್ತೆ ಅರೆಸ್ಟ್ ; ಕಾರಣವೇನು..?

---Advertisement---

ಬೆಂಗಳೂರು; ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡ ನಿನ್ನೆಯಷ್ಟೇ ಪೊಲೀಸರ ವಶದಲ್ಲಿದ್ದರು. ಬಳಿಕ ರಾತ್ರಿಯೇ ಅವರನ್ನು ಬಿಟ್ಟು ಕಳುಹಿಸಿ, ಬೆಳಗ್ಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಇದೀಗ ಮತ್ತೆ ಪೊಲೀಸರು ಮತ್ತೆ ಬಂಧಿಸಿದ್ದಾರೆ.

ರಜತ್ ಹಾಗೂ ವಿನಯ್ ಗೌಡ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಒಂದನ್ನ ಶೇರ್ ಮಾಡಿದ್ದರು. ಲಾಂಗ್ ಹಿಡಿದು ಸ್ಟೈಲ್ ಆಗಿ ವಾಕ್ ಮಾಡುತ್ತಾ, ಪೋಸ್ ನೀಡಿದ್ದರು. ಹೀಗಾಗಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು, ವುಚಾರಣೆ ನಡೆಸಿ, ಬಿಟ್ಟು ಕಳುಹಿಸಿದ್ದರು. ಆದರೆ ಸೋಷಿಯಲ್ ಮೀಡಿಯಾದಲ್ಲಿ ರಜತ್ ಕಿಶನ್ ಹಾಗೂ ವಿನಯ್ ಗೌಡ ಪೊಲೀಸ್ ತನಿಖೆಯಲ್ಲಿ ನೀಡಿರುವ ಮಚ್ಚು ಬೇರೆಯಾಗಿತ್ತು, ರೀಲ್ಸ್ ನಲ್ಲಿ ತೋರಿಸಿರುವ ಮಚ್ಚು ಬೇರೆಯಾಗಿತ್ತು ಎಂಬ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಪೊಲೀಸರು ಇಬ್ಬರನ್ನು ಮತ್ತೆ ಅರೆಸ್ಟ್ ಮಾಡಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ನಕಲಿ ಲಾಂಗ್ ನೀಡಿರುವುದು ಬೆಳಕಿಗೆ ಬಂದಿತ್ತು. ಅಸಲಿ ಲಾಂಗ್ ಅಕ್ಷಯ ಸ್ಟುಡಿಯೋದಲ್ಲಿ ಇದೆ ಎಂಬ ಹೇಳಿಕೆ ನೀಡಿದ್ದರಿಂದ ಪೊಲೀಸರು ಇಬ್ಬರನ್ನು ಅಕ್ಷಯ ಸ್ಟುಡಿಯೋಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ತನಿಖೆಯಲ್ಲಿ ಸಾಕ್ಷ್ಯ ನಾಶ ಮಾಡುವ ಹಿನ್ನೆಲೆ ವಿನಯ್ ಹಾಗೂ ರಜತ್ ಅವರನ್ನು ಮತ್ತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗ ಪೊಲೀಸರು ಆರೋಪಿಗಳನ್ನು ನೇರವಾಗಿ ಕೋರ್ಟ್ ಗೆ ಹಾಜರು ಪಡಿಸುತ್ತಾರೆ. ಒರಿಜಿನಲ್ ಲಾಂಗ್ ಸಿಗದೆ ಹೋದಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಿಗೆ ಸಂಕಷ್ಟ ತಪ್ಪಿದ್ದಲ್ಲ. ಮೊದಲೇ ಪೊಲೀಸರಿಗೆ ನಿಜವಾದ ಲಾಂಗ್ ಕೊಡದೆ ಯಾಮಾರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...