Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಶವ ಸಿಕ್ಕ ಜಾಗದಲ್ಲಿಯೇ ಮಚ್ಚು ಎಸೆದಿದ್ದ ರಜತ್ ಮತ್ತೆ ಅರೆಸ್ಟ್..!

---Advertisement---

ಬೆಂಗಳೂರು; ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ರಜತ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಸವೇಶ್ವರ ನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿ ಬಿಟ್ಟಿದ್ದರು. ಆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ರಜತ್ ಮತ್ತು ವಿನಯ್ ಅವರನ್ನು ಬಂಧಿಸಿದ್ದರು. ಆದರೆ ಬಂಧನವಾದ ಬಳಿಕ ರಜತ್ ಪತ್ನಿ ಅಕ್ಷತಾ ಫೈಬರ್ ಮಚ್ಚು ಕೊಟ್ಟು ಯಾಮಾರಿಸಿದ್ದರು. ಅಸಲಿ ಮಚ್ಚು ಅದಾಗಿಲ್ಲವಾಗಿದ್ದ ಕಾರಣ ವಿನಯ್ ಹಾಗೂ ರಜತ್ ಇಬ್ಬರನ್ನು ಬಂಧಿಸಿ, ಜೈಲು ವಾಸ ಅನುಭವಿಸುವಂತೆ ಮಾಡಿದ್ದರು.

ಆನಂತರ ಷರತ್ತು ಬದ್ಧ ಜಾಮೀನು ಪಡೆದು ಇಬ್ಬರು ಹೊರಗೆ ಬಂದಿದ್ದರು. ವಿಚಾರಣೆಯ ವೇಳೆ ರಜತ್ ಮಚ್ಚನ್ನ ಎಲ್ಲಿ ಬಿಸಾಡಿದ್ದೀವಿ ಎಂಬ ಮಾಹಿತಿಯನ್ನು ನೀಡಿದ್ದರು. ಈ ಹಿಂದೆ ಚಿತ್ರದುರ್ಗದ ರೇಣುಕಾಸ್ವಾಮಿ ಶವ ಬಿಸಾಡಿದ್ದ ಜಾಗ ಸುಮ್ಮನಹಳ್ಳಿ ರಾಜಕಾಲುವೆ ಬಳಿ ಶವ ಬಿಸಾಡಿರುವ ಬಗ್ಗೆ ಮಾಹಿತಿ ಅಲ್ಲಿ ಹೋಗಿ ನೋಡಿದಾಗಲೂ ಮಚ್ಚು ಸಿಕ್ಕಿರಲಿಲ್ಲ. ರೀಲ್ಸ್ ನಲ್ಲಿ ಬಳಸಿದ್ದ ಮಚ್ಚು ಎಲ್ಲಿ ಹೋಗಿದೆ ಎಂಬುದರ ಸ್ಪಷ್ಟ ಮಾಹಿತಿ ಇನ್ನು ಪೊಲೀಸರಿಗೆ ಸಿಕ್ಕಿಲ್ಲ.

ಇದರ ನಡುವೆ ಪ್ರತಿ ವಿಚಾರಣೆಗೂ ರಜತ್ ಅಂಡ್ ವಿನಯ್ ಹಾಜರಾಗಬೇಕು ಎಂಬುದನ್ನ ಕೋರ್ಟ್ ಸೂಚನೆ ನೀಡಿತ್ತು. ಆದರೆ ರಜತ್ ಕಿಶನ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಕಾರಣಕ್ಕೆ ನ್ಯಾಯಾಲಯವೂ ರಜತ್ ವಿರುದ್ಧ ವಾರೆಂಟ್ ಹೊರಡಿಸಿತ್ತು. ಹೀಗಾಗಿ ಇಂದು ಪೊಲೀಸರು ಮತ್ತೆ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಮತ್ತೆ ಮತ್ತೆ ಅರೆಸ್ಟ್ ಆದರೂ ರಜತ್ ಹಾಗೂ ವಿನಯ್ ಬಳಸಿದ್ದ ರಿಯಲ್ ಮಚ್ಚು ಮಾತ್ರ ಪೊಲೀಸರಿಗೆ ಸಿಗುತ್ತಿಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment