Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಸಭಾ ಚುನಾವಣೆ : ಅಡ್ಡಮತದಾನ ಮಾಡಿದ ಎಸ್ ಟಿ ಸೋಮಶೇಖರ್

---Advertisement---

 

ಬೆಂಗಳೂರು: ಇತ್ತಿಚೆಗೆ ಬಿಜೆಪಿಗಿಂತ ಕಾಂಗ್ರೆಸ್ ಕಡೆಗೆ ಹೆಚ್ಚು ಒಲವು ಹೊಂದಿದ್ದ ಎಸ್ ಟಿ ಸೋಮಶೇಖರ್ ವಿಚಾರದಲ್ಲಿ ಬಿಜೆಪಿ ನಾಯಕರಿಗೇನೆ ಹಲವು ಅನುಮಾನಗಳಿದ್ದವು. ಅದರಲ್ಲೂ ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ವಿರುದ್ಧವಾಗಿ ವೋಟ್ ಹಾಕಬಹುದು ಎಂಬ ಅನುಮಾನವಿತ್ತು. ಇದೀಗ ಅದೇ ಸತ್ಯವಾಗಿದೆ. ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡಮತದಾನ ಮಾಡಿದ್ದಾರೆ. ಈ ಸಂಬಂಧ ಎಲೆಕ್ಷನ್ ಏಜೆಂಟ್ ಸುನೀಲ್ ಕುಮಾರ್ ಮಾಹಿತಿ ನೀಡಿದ್ದಾರೆ.

 

ಮತ ಹಾಕಿದ ಬಳಿಕ ನನ್ನ ಆತ್ಮಸಾಕ್ಷಿಗೆ ತೃಪ್ತಿ ನೀಡುವಂತೆ ಮತ ಹಾಕಿದ್ದೀನಿ ಎಂದಿದ್ದಾರೆ. ಇದು ಬಿಜೆಪಿ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಎಸ್ ಟಿ ಸೋಮಶೇಖರ್ ಅವರ ನಡೆಗೆ ಬಿಜೆಪಿ ಪಾಳಯ ಕೆಂಡಾಮಂಡಲವಾಗಿದೆ.

ಇನ್ನು ಚುನಾವಣೆಯಲ್ಲಿ ಮತ ಹಾಕುವುದಕ್ಕೂ ಮೊದಲು ಎಸ್ ಟಿ ಸೋಮಶೇಖರ್ ಮಾತನಾಡಿದ್ದರು. ಅನುದಾನ ನೀಡುವಂತವರಿಗೆ ಆತ್ಮಸಾಕ್ಷಿಯಿಂದ ಮತ ಹಾಕುತ್ತೀನಿ. ಹನ್ನೊಂದು ವರ್ಷದಿಂದ ಎಲ್ಲರಿಗೂ ಹಾಕಿದ್ದೀನಿ. ರಾಜ್ಯಸಭೆಗೆ ಆಯ್ಕೆಯಾದವರು ಒಂದು ರೂಪಾಯಿ ಅನುದಾನ ನೀಡಿಲ್ಲ. ನೇರಾ ನೇರ ಹೇಳ್ತೀನಿ ಯತ್ನ ಸಾಕ್ಷಿಯಿಂದ ಮತ ಹಾಕ್ತೀನಿ. ಕಳೆದ ಬಾರಿ ನಿರ್ಮಲಾ ಸೀತರಾಮನ್ ಗೆ ಮತ ಹಾಕಿದ್ದೆ. ಆಮೇಲೆ ನಿರ್ಮಲಾ ಸೀತರಾಮನ್ ನನಗೆ ಅಪಾಯಿಟ್ಮೆಂಟ್ ಕೊಡಲೇ ಇಲ್ಲ. ನನಗೆ ಯಾರೂ ಪ್ರಾಮೀಸ್ ಮಾಡುತ್ತಾರೆ, ಅವರಿಗೆ ಮತ ಕೊಡುತ್ತೀನಿ. ನೆಪ ಹೇಳ್ತಿಲ್ಲ. ಐದಾರು ಸರಿ ವಿಒಟ್ ಹೇಳಿದಾಗೆ ಹಾಕಿದ್ದೀನಿ. ವೋಟ್ ಹಾಕಿಸೋ ಮೊದಲು ಪ್ರಾಮಿಸ್ ಮಾಡುತ್ತಾರೆ. ಐದು ಕೋಟಿ ಅನುದಾನ ಬರುತ್ತೆ ನಮಗೆ ಕೊಡುತ್ತಾರಾ..?. ಅಲ್ಲಿ ಹೋದಂತ ಸಂದರ್ಭದಲ್ಲಿ ಆತ್ಮಸಾಕ್ಷಿಯಾಗಿ ಮತ ಹಾಕುತ್ತೀನಿ ಎಂದು ಹೇಳಿದ್ದರು. ಇದೀಗ ಅಡ್ಡ ಮತದಾನ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment