ರಾಜ್ಯಸಭಾ ಚುನಾವಣೆ : ಅಡ್ಡಮತದಾನ ಮಾಡಿದ ಎಸ್ ಟಿ ಸೋಮಶೇಖರ್

 

ಬೆಂಗಳೂರು: ಇತ್ತಿಚೆಗೆ ಬಿಜೆಪಿಗಿಂತ ಕಾಂಗ್ರೆಸ್ ಕಡೆಗೆ ಹೆಚ್ಚು ಒಲವು ಹೊಂದಿದ್ದ ಎಸ್ ಟಿ ಸೋಮಶೇಖರ್ ವಿಚಾರದಲ್ಲಿ ಬಿಜೆಪಿ ನಾಯಕರಿಗೇನೆ ಹಲವು ಅನುಮಾನಗಳಿದ್ದವು. ಅದರಲ್ಲೂ ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ವಿರುದ್ಧವಾಗಿ ವೋಟ್ ಹಾಕಬಹುದು ಎಂಬ ಅನುಮಾನವಿತ್ತು. ಇದೀಗ ಅದೇ ಸತ್ಯವಾಗಿದೆ. ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡಮತದಾನ ಮಾಡಿದ್ದಾರೆ. ಈ ಸಂಬಂಧ ಎಲೆಕ್ಷನ್ ಏಜೆಂಟ್ ಸುನೀಲ್ ಕುಮಾರ್ ಮಾಹಿತಿ ನೀಡಿದ್ದಾರೆ.

 

ಮತ ಹಾಕಿದ ಬಳಿಕ ನನ್ನ ಆತ್ಮಸಾಕ್ಷಿಗೆ ತೃಪ್ತಿ ನೀಡುವಂತೆ ಮತ ಹಾಕಿದ್ದೀನಿ ಎಂದಿದ್ದಾರೆ. ಇದು ಬಿಜೆಪಿ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಎಸ್ ಟಿ ಸೋಮಶೇಖರ್ ಅವರ ನಡೆಗೆ ಬಿಜೆಪಿ ಪಾಳಯ ಕೆಂಡಾಮಂಡಲವಾಗಿದೆ.

ಇನ್ನು ಚುನಾವಣೆಯಲ್ಲಿ ಮತ ಹಾಕುವುದಕ್ಕೂ ಮೊದಲು ಎಸ್ ಟಿ ಸೋಮಶೇಖರ್ ಮಾತನಾಡಿದ್ದರು. ಅನುದಾನ ನೀಡುವಂತವರಿಗೆ ಆತ್ಮಸಾಕ್ಷಿಯಿಂದ ಮತ ಹಾಕುತ್ತೀನಿ. ಹನ್ನೊಂದು ವರ್ಷದಿಂದ ಎಲ್ಲರಿಗೂ ಹಾಕಿದ್ದೀನಿ. ರಾಜ್ಯಸಭೆಗೆ ಆಯ್ಕೆಯಾದವರು ಒಂದು ರೂಪಾಯಿ ಅನುದಾನ ನೀಡಿಲ್ಲ. ನೇರಾ ನೇರ ಹೇಳ್ತೀನಿ ಯತ್ನ ಸಾಕ್ಷಿಯಿಂದ ಮತ ಹಾಕ್ತೀನಿ. ಕಳೆದ ಬಾರಿ ನಿರ್ಮಲಾ ಸೀತರಾಮನ್ ಗೆ ಮತ ಹಾಕಿದ್ದೆ. ಆಮೇಲೆ ನಿರ್ಮಲಾ ಸೀತರಾಮನ್ ನನಗೆ ಅಪಾಯಿಟ್ಮೆಂಟ್ ಕೊಡಲೇ ಇಲ್ಲ. ನನಗೆ ಯಾರೂ ಪ್ರಾಮೀಸ್ ಮಾಡುತ್ತಾರೆ, ಅವರಿಗೆ ಮತ ಕೊಡುತ್ತೀನಿ. ನೆಪ ಹೇಳ್ತಿಲ್ಲ. ಐದಾರು ಸರಿ ವಿಒಟ್ ಹೇಳಿದಾಗೆ ಹಾಕಿದ್ದೀನಿ. ವೋಟ್ ಹಾಕಿಸೋ ಮೊದಲು ಪ್ರಾಮಿಸ್ ಮಾಡುತ್ತಾರೆ. ಐದು ಕೋಟಿ ಅನುದಾನ ಬರುತ್ತೆ ನಮಗೆ ಕೊಡುತ್ತಾರಾ..?. ಅಲ್ಲಿ ಹೋದಂತ ಸಂದರ್ಭದಲ್ಲಿ ಆತ್ಮಸಾಕ್ಷಿಯಾಗಿ ಮತ ಹಾಕುತ್ತೀನಿ ಎಂದು ಹೇಳಿದ್ದರು. ಇದೀಗ ಅಡ್ಡ ಮತದಾನ ಮಾಡಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago