Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಸಭಾ ಚುನಾವಣಾ ಹಿನ್ನೆಲೆ ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ

Facebook
Twitter
Telegram
WhatsApp

 

ಬೆಂಗಳೂರು: ಜೂನ್ 10 ರಂದು ಬೆಳಗ್ಗೆ 10 ಗಂಟೆಯಿಂದ ರಾಜ್ಯಸಭಾ ಚುನಾವಣೆ ನಡೆಯಲಿದೆ. ವಿಧಾ‌ನಸೌಧದ ಮೊದಲನೇ‌ಮಹಡಿಯಲ್ಲಿರುವ 106 ನೇ ಕೊಠಡಿಯಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಕಾಂಗ್ರೆಸ್ ತನ್ನ ಕಾರ್ಯಕರ್ತರಿಗೆ ವಿಪ್ ಜಾರಿ ಮಾಡಿದೆ.

ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಕಡ್ಡಾಯವಾಗಿ ಭಾಗವಹಿಸಿ, ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಗೆ ಮತ ನೀಡಲೇಬೇಕೆಂದು ಗುರುವಾರವೇ ವಿಪ್ ಜಾರಿ ಮಾಡಿದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಅದರಲ್ಲಿ ಎರಡು ಸ್ಥಾನಗಳಿಗೆ ಕಾಂಗ್ರೆಸ್ ಸ್ಪರ್ಧೆ ನಡೆಸಿದ್ದು, ಅಭ್ಯರ್ಥಿಗಳನ್ನು ಹಾಕಿದೆ.

ಮೊದಲ ಅಭ್ಯರ್ಥಿ ಜೈರಾಂ ರಮೇಶ್ ಮತ್ತು ಎರಡನೇ ಅಭ್ಯರ್ಥಿ ಮನ್ಸೂರ್ ಖಾನ್ ಅವರನ್ನು ಹಾಕಲಾಗಿದೆ. ಎರಡನೇ ಅಭ್ಯರ್ಥಿಯನ್ನು ಹಿಂಪಡೆಯಲು ಜೆಡಿಎಸ್ ಸಾಕಷ್ಟು ಕಸರತ್ತು ನಡೆಸಿದ್ದರು, ಎರಡನೇ ಅಭ್ಯರ್ಥಿ ಕಣದಲ್ಲಿಯೇ ಇದ್ದಾರೆ. ಕಾಂಗ್ರೆಸ್ ಒಳಗೇನೆ ಎರಡನೇ ಅಭ್ಯರ್ಥಿ ಪರ ಅಪಸ್ವರ ಕೇಳಿ ಬಂದಿದೆ. ಕೆಲವರು ಪರೋಕ್ಷವಾಗಿ ಜೆಡಿಎಸ್ ಬೆಂಬಲ ಸೂಚಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಮನ್ಸೂರ್ ಖಾನ್ ಗೆಲುವು ಅನುಮಾನವಿದ್ದರು, ಜೈರಾಂ ರಮೇಶ್ ಗೆಲುವು ಖಚಿತವಾಗಿದೆ.

ಕುಪೇಂದ್ರ ರೆಡ್ಡಿಯವರ ಮಾತಿನ ಮೇಲೆ ಕಾಂಗ್ರೆಸ್ ಮತಗಳು ಛಿದ್ರವಾಗುವ ಸಾಧ್ಯತೆಯೂ ಇದೆ. ಜೂನ್ 10 ರಂದೇ ಚುನಾವಣೆ ನಡೆದು ಅಂದೇ ಫಲಿತಾಂಶವು ಹೊರಬೀಳಲಿದೆ. ಹೀಗಾಗಿ ಒಂದೇ ದಿನದಲ್ಲಿ ಶಾಸಕರ ಒಲವು ತಿಳಿಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!