Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಸಭೆ ಟಿಕೆಟ್ ಮಿಸ್ ಆಯ್ತು.. ಲೋಕಸಭೆಗೆ ಗ್ಯಾರಂಟಿನಾ..? : ವಿ ಸೋಮಣ್ಣ ಹೇಳಿದ್ದೇನು..?

Facebook
Twitter
Telegram
WhatsApp

 

ತುಮಕೂರು: ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸೋಲು ಕಂಡಿದ್ದ ವಿ ಸೋಮಣ್ಣ, ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ ಎಂದೇ ಹೇಳಲಾಗುತ್ತಿದೆ. ಅದರಲ್ಲೂ ತುಮಕೂರಿನಿಂದ ಸ್ಪರ್ಧೆಗೆ ಬಯಸುತ್ತಿದ್ದಾರೆ ಎಂದೇ ಹೇಳಲಾಗುತ್ತಿದೆ. ಅದಕ್ಕೆ ಪೂರಕವೆಂಬಂತೆ ತುಮಕೂರು ಕ್ಷೇತ್ರದಲ್ಲಿ ಹೆಚ್ಚು ಓಡಾಟ ನಡೆಸುತ್ತಿದ್ದಾರೆ. ಇಂದು ಕೂಡ ತುಮಕೂರು ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಗೂ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಕಡೆ ಗಳಿಗೆಯಲ್ಲಿ ಸೋಮಣ್ಣ ಅವರಿಗೆ ಟಿಕೆಟ್ ಮಿಸ್ ಆಗಿದೆ. ಈ ಬಗ್ಗೆ ಮಾತನಾಡಿದ ಅವರು, ನಾನು ರಾಜ್ಯಸಭೆಗೆ ಸ್ಪರ್ಧೆ ಮಾಡುತ್ತೇನೆ ಎಂದದ್ದು ನಿಜ. ರಾಜ್ಯಸಭೆಗೆ ಎಲ್ಲವೂ ಕೊನೆ ಹಂತಕ್ಕೆ ಬಂದಿತ್ತು. ಕೊನೆ ಕ್ಷಣದಲ್ಲಿ ಎಲ್ಲವೂ ಬದಲಾಗಿದೆ. ಒಳ್ಳೆ ಕಾರ್ಯಕರ್ತನಿಗೆ ಟಿಕೆಟ್ ನೀಡಿದ್ದಾರೆ. ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದೇನೆ ಎಂದಿದ್ದಾರೆ.

ಇನ್ನು ಲೋಕಸಭಾ ಚುನಾವಣಾ ಟಿಕೆಟ್ ಬಗ್ಗೆ ಮಾತನಾಡಿ, ಲೋಕಸಭಾ ಚುನಾವಣೆಗೆವಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ಹೈಕಮಾಂಡ್ ಏನು ಹೇಳುತ್ತದೆ ಅದನ್ನು ಕೇಳುತ್ತೇನೆ. ಹೈಕಮಾಂಡ್ ಟಿಜೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ನಿಂತುಕೊಳ್ಳಬೇಕು ಅಂದರೆ ನಿಂತುಕೊಳ್ಳುತ್ತೇನೆ. ಮಾಧುಸ್ವಾಮಿ ನಮ್ಮ ಹಿರಿಯ ನಾಯಕರು. ನನಗಿಂತ ಬುದ್ದಿವಂತರಿದ್ದಾರೆ. ಹೋರಾಟದಿಂದ ಬಂದವರು. ಮಾಧುಸ್ವಾಮಿ ಅವರು ಹೇಳುವುದು ಸಹಜ. ಅದಕ್ಕೆ ನನ್ನ ಭಿನ್ನಾಭಿಪ್ರಾಯ ಏನು ಇಲ್ಲ. ಹೈಕಮಾಂಡ್ ಟಿಕೆಟ್ ನೀಡಿದರೆ ಖಂಡಿತ ಸ್ಪರ್ಧೆ ಮಾಡುತ್ತೇನೆ. ಇದು ಬಿಜೆಪಿ ಕ್ಷೇತ್ರ, ಇಲ್ಲಿ ಬಸವರಾಜು ಅವರು ಎಂ.ಪಿ ಇದ್ದಾರೆ. ವಯಸ್ಸಿನ ಕಾರಣ ಅವರು ಸ್ಪರ್ಧೆ ಮಾಡಲ್ಲ ಎಂದು ತಿರ್ಮಾನ ಮಾಡಿದ್ದಾರೆ. ನಾವು ಬಿಜೆಪಿ ಅವರು ನಮ್ಮ ಹಕ್ಕನ್ನು ಪ್ರತಿಪಾದಿಸುತ್ತೀವಿ. ಕ್ಷೇತ್ರ ಯಾರಿಗೆ ಹೋಗಬೇಕು ಎಂಬುದನ್ನ ತಿರ್ಮಾನ ಮಾಡುತ್ತೆ. ಈಗಾಗಲೇ ಎಲ್ಲವನ್ನು ಹೈಕಮಂಡ್ ತಿರ್ಮಾನ ಮಾಡಿದೆ. ನನಗೂ ತುಮಕೂರಿಗೂ ಅವಿನಾಭಾವ ಸಂಬಂಧ ಇದೆ. ಯಾರನ್ನ ಎಲ್ಲೇಲ್ಲಿ ಕರೆಸಿಕೊಳ್ಳಬೇಕು, ಎಲ್ಲೇಲ್ಲಿ ಕೆಲಸ ಮಾಡಿಸಿಕೊಳ್ಳಬೇಕು ಎನ್ನುವುದು ಭಗವಂತನ ನಿರ್ಣಯ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!