ಕೋಡಿಹಳ್ಳಿ ಬಗ್ಗೆ ಮಾತನಾಡುವಾಗ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ..!

suddionenews
1 Min Read

ಬೆಂಗಳೂರು: ರೈತ ನಾಯಕ ರಾಜೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿರುವ ಘಟನೆ ನಗರದಲ್ಲಿ ನಡೆದಿದೆ. ಸುದ್ದಿಗೋಷ್ಟಿಯಲ್ಲಿ ಮಾತನಾಡುವಾಗ ಈ ಘಟನೆ ನಡೆದಿದೆ. ಕೋಡಿಹಳ್ಳಿ ಚಂದ್ರಶೇಖರ್ ಬೆಂಬಲಿಗರೇ ಈ ರೀತಿ ಮಾಡಿದ್ದಾರೆಂದು ಟಿಕಾಯತ್ ಆರೋಪ ಮಾಡಿದ್ದಾರೆಂದು ವರದಿಯಾಗಿದೆ.

ರೈತ ಹೋರಾಟದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಬಗ್ಗೆ ಇತ್ತಿಚೆಗೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸ್ಪಷ್ಟನೆ ಕೊಡುತ್ತಿದ್ದರು. ಕೋಡಿಹಳ್ಳಿ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಮಾತನಾಡುವಾಗ ಮಾತಿನ ಚಕಮಕಿ ನಡೆದಿದೆ. ಈ ವೇಳೆ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದು, ಅಲ್ಲಿದ್ದ ಚೇರುಗಳನ್ನು ಚೆಲ್ಲಾಪಿಲ್ಲಿಯಾಗಿ ಎಸೆಯಲಾಗಿದೆ.

ಈ ವೇಳೆ ವ್ಯಕ್ತಿಯೊಬ್ಬ ರಾಕೇಶ್ ಟಿಕಾಯತ್ ಮೇಲೆ ಮೈಕ್ ನಿಂದ ಹಲ್ಲೆ ನಡೆಸಿದ್ದಾರೆ. ಮಸಿ ಬಳಿದು ರಾದ್ಧಾಂತ ನಡೆಸಿದ್ದಾರೆ. ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ಮಾಡಿದ್ದರು. ಟಿಕಾಯತ್ ಅದರಲ್ಲಿ ಮುಂಚೂಣಿಯಲ್ಲಿದ್ದರು. ಬಳಿಕ ಟಿಕಾಯತ್ ಮತ್ತು ಕೋಡಿಹಳ್ಳಿ ಪರಸ್ಪರ ಭ್ರಷ್ಟಾಚಾರದ ಆರೋಪಗಳನ್ನು ಮಾಡಿಕೊಳ್ಳುತ್ತಿದ್ದರು. ಇದೀಗ ಅದಕ್ಕೆ ಸ್ಒಷ್ಟನೆ ನೀಡುವಾಗ ಟಿಕಾಯತ್ ಮುಖಕ್ಕೆ ಮಸಿ ಬಳಿದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *