Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಡಿಯೋ ಲಾಂಚ್ ವೇಳೆ ಅಚಾತುರ್ಯ : ಅಪ್ಪು ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ರಕ್ಷಿತಾ, ಪ್ರೇಮ್, ರಚಿತಾ..!

Facebook
Twitter
Telegram
WhatsApp

ಬೆಂಗಳೂರು: ಅಪ್ಪು ನಮ್ಮನ್ನಗಲಿದ್ದಾರೆ ಅಂದ್ರೆ ಯಾರಿಗೂ ಈಗಲೂ ಅರಗಿಸಿಕೊಳ್ಳೋದಕ್ಕೆ ಆಗ್ತಾ ಇಲ್ಲ. ಆ ಸತ್ಯವನ್ನ ಒಪ್ಪಿಕೊಳ್ಳುವ ಗೋಜಿಗೆ ಹೋಗ್ತಾ ಇಲ್ಲ. ಅಪ್ಪು ಇಲ್ಲ ಎನ್ನುವುದಕ್ಕಿಂತ ಅವರು ನಮ್ಮ ನಡುವೆಯೇ ಜೀವಂತವಾಗಿದ್ದಾರೆ ಎಂದುಕೊಂಡು ಬಿಡೋಣಾ ಅಂತ ಆ ಕಹಿ ಸತ್ಯವನ್ನ ಅಲ್ಲಿಗೆ ಬಿಟ್ಟಿದ್ದಾರೆ ಕೋಟ್ಯಾಂತರ ಅಭಿಮಾನಿಗಳು.

ಅಪ್ಪುಗೆ ಎಲ್ಲರೂ ಗೌರವ ಸೂಚಿಸುತ್ತಿದ್ದಾರೆ. ಅಪ್ಪು ಒಂದು ದಿನ ಕುಡಿತದ ಜಾಹೀರಾತಿನಲ್ಲಿ ಕಾಣಿಸಿಕೊಂಡವರಲ್ಲ, ಕೆಟ್ಟದ್ದನ್ನ ಉತ್ತೇಜಿಸಿದವರಲ್ಲ. ಹೀಗಿರುವಾಗ ಅವರ ಫೋಟೋ ಮುಂದೆ ಶಾಂಪೇನ್ ಓಪನ್ ಮಾಡಿದ್ರೆ ಅಭಿಮಾನಿಗಳಿಗೆ ಹೇಗಾಗಬೇಡ..?

ಹೌದು ನಿನ್ನೆ ರಾತ್ರಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಈ ದುರ್ಘಟನೆ ನಡೆದು ಹೋಗಿದೆ. ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಅಪ್ಪುಗೆ ಮೊದಲು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಪ್ಪು ಫೋಟೋ ಇನ್ನು ಪರದೆ ಮೇಲೆ ಇರುವಾಗಲೇ ಶಾಂಪೇನ್ ಓಪನ್ ಮಾಡಿದ್ದಾರೆ. ರಕ್ಷಿತಾ, ರಚಿತಾ, ಮಂಗ್ಲಿ ಹಾಗೂ ಅಕುಲ್ ಬಾಲಾಜಿ ವೇದಿಕೆ ಮೇಲಿದ್ದರು. ಈ ವೇಳೆ ಶಾಂಪೇನ್ ಸಿಡಿಸಿ, ಸಾಂಗ್ ರಿಲೀಸ್ ಮಾಡಿ ಸಂಭ್ರಮ ಪಟ್ಟರು. ಇದು ಇಡೀ ಅಭಿಮಾನಿಗಳಿಗೆ ಬೇಸರ ತರಿಸಿದೆ.

ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ, ನಟಿ ರಕ್ಷಿತಾ ಹಾಗೂ ರಚಿತಾ ಇಬ್ಬರು ಕ್ಷಮೆ ಕೇಳಿದ್ದಾರೆ. ಗೊತ್ತಿಲ್ಲದೆ ಆದ ತಪ್ಪು. ಅಪ್ಪು ಮೇಲೆ ನಮಗೂ ಅಪಾರ ಗೌರವವಿದೆ ಎಂದಿದ್ದಾರೆ. ಇನ್ನು ಚಿತ್ರತಂಡ ಕೂಡ ಕ್ಷಮೆ ಕೇಳಿದ್ದು, ತಾಂತ್ರಿಕ ದೋಷದಿಂದ ಈ ರೀತಿ ಆಗಿದೆ. ಶಾಂಪೇನ್ ಓಪನ್ ಮಾಡಿ ಸಾಂಗ್ ರಿಲೀಸ್ ಮಾಡೋ ಫ್ಲ್ಯಾನ್ ಮಾಡಿಕೊಂಡಿದ್ದೆವು. ಶಾಂಪೇನ್ ಓಪನ್ ಆಗಿದ ಕೂಡಲೇ ಸಿನಿಮಾದ ಸಾಂಗ್ ಪರದೆಯ ಮೇಲೆ ಪ್ಲೇ ಆಗಬೇಕಿತ್ತು. ಆದ್ರೆ ತಾಂತ್ರಿಕ ದೋಷದಿಂದ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿದ್ದ ವಿಡಿಯೋ ಪ್ಲೇ ಆಗಿದೆ. ಇದಕ್ಕೆ ಕ್ಷನೆಯಾಚಿಸುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಸಹಕಾರಿ : ಸತೀಶ್ ಜಾರಕಿಹೊಳಿ

ಚಿತ್ರದುರ್ಗ, ಏ. 24 :  ವೀರ ಮದಕರಿ ನಾಯಕ ನಾಡಿನ ಎಲ್ಲ ಜಾತಿ ಜನರ ಪ್ರೀತಿ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಸಚಿವ ಸತೀಶ್

ಮೈಸೂರಿನಲ್ಲಿ ಅಭ್ಯರ್ಥಿ ಬದಲಾಯಿಸಿದ್ದೇಕೆ..? ಯದುವೀರ್ ಗೆ ಟಿಕೆಟ್ ಕೊಟ್ಟಿದ್ದೇಕೆ..?: ಸ್ಪಷ್ಟನೆ ನೀಡಿದ ವಿಜಯೇಂದ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅದರಲ್ಲೂ ಈ ಬಾರಿ ಬಿಜೆಪಿಯಲ್ಲಿ ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಘಟಾನುಘಟಿಗಳಿಗೆ ಟಿಕೆಟ್ ಮಿಸ್ ಆಗಿದೆ. ಮೈಸೂರಿನಿಂದ ಪ್ರತಾಪ್

ಡಾ.ರಾಜ್ 95ನೇ ಹುಟ್ಟುಹಬ್ಬ : ಸಮಾಧಿಗೆ ಪೂಜೆ ಸಲ್ಲಿಸಿದ ರಾಘಣ್ಣ, ಅಶ್ವಿನಿ, ವಂದಿತಾ

ಬೆಂಗಳೂರು: ಇಂದು ವರನಟ ಡಾ.ರಾಜ್ ಕುಮಾರ್ ಅವರ 95ನೇ ವರ್ಷದ ಹುಟ್ಟುಹಬ್ಬ. ಅವರ ಅಭಿಮಾನಿಗಳು ರಾಜ್ಯಾದ್ಯಂತ ಈ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ, ಅಣ್ಣಾವ್ರ ಹುಟ್ಟುಹಬ್ಬವನ್ನು ಸಾರ್ಥಕ ಮಾಡುತ್ತಿದ್ದಾರೆ. ಅವರ ಅಭಿಮಾನಿಗಳಿಂದ ಪ್ರತಿ

error: Content is protected !!