Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯ ರಾಮಕೃಷ್ಣ ಹೆಗಡೆ ನಗರ ತೆರವು :ನಾಳೆ ಸಂಜೆವರೆಗೂ 144 ಸೆಕ್ಷನ್ ಜಾರಿ..!

Facebook
Twitter
Telegram
WhatsApp

ದಾವಣಗೆರೆ: ರಿಂಗ್ ರೋಡ್ ರಸ್ತೆಯಲ್ಲಿ‌ಕಾಮಗಾರಿ ನಡೆಯುತ್ತಿರುವ ಕಾರಣ ನಾಳೆ‌ ಸಂಜೆ ತನಕ 144 ಸೆಕ್ಷನ್ ಜಾರಿ ಮಾಡಲಾಗಿದೆ. ದಾವಣಗೆರೆ ನಗರದ ಮಾಗಾನಹಳ್ಳಿ ರಸ್ತೆಯಲ್ಲಿರುವ ರಾಮಕೃಷ್ಣ ಹೆಗಡೆ ನಗರ ತೆರವು ಕಾರ್ಯಾಚರಣೆ ಆರಂಭವಾಗಿದೆ. ಹೀಗಾಗಿ ನಾಳೆ ಸಂಜೆವರೆಗೂ 144 ಎಸಕ್ಷನ್ ಜಾರಿ ಮಾಡಲಾಗಿದೆ.

ಈ ಸಂಬಂಧ ದಾವಣಗೆರೆ ಉಪವಿಭಾಗಾಧಿಕಾರಿ ದುರ್ಗಾಶ್ರೀ ಆದೇಶ ಹೊರಡಿಸಿದ್ದಾರೆ. ರಾಮಕೃಷ್ಣ ಹೆಗಡೆ ನಗರದಲ್ಲಿ ಕೆಲವು ಮನೆಗಳನ್ನು ತೆರವು ಮಾಡಲಾಗುತ್ತದೆ. ಪೊಲೀಸರ ಸಮ್ಮುಖದಲ್ಲಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜೆಸಿಬಿ ಮೂಲಕ ಅನೇಕ ಅಲ್ಪಸಂಖ್ಯಾತರ ಮನೆಗಳ ತೆರವು ಕಾರ್ಯಾಚತಣೆ ನಡೆದಿದೆ. ಸುಮಾರು 419ಕ್ಕೂ ಹೆಚ್ಚು ಮನೆಗಳನ್ನು ತೆರವು ಮಾಡಲು ಪ್ಲ್ಯಾನ್ ಮಾಡಲಾಗಿದೆ. ಜೊತೆಗೆ ಕೆಲವರಿಗೆ ಬೇರೆ ಕಡೆ ವಾಸಿಸಲು ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ.

ಮನೆಗಳ ತೆರವಿಗೆ ಹಕ್ಕು ಪತ್ರ ಸಿಗದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮನೆಯಲ್ಲಿರುವ ವಸ್ತುಗಳನ್ನು ತೆಗೆಯದೆ ಬಿಡದೆ ಜೆಸಿಬಿಯಿಂದ ಏಕಾಏಕಿ ಮನೆಗಳನ್ನು ತೆರವು ಮಾಡಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿಯೇ ಪಾಲಿಕೆ ಆಯುಕ್ತೆ ರೇಣುಕಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವೂ ಪೊಲೀಸ್, ಜೆಸಿಬಿ ತಂದರೂ ನಾವೂ ಹೆದರುವುದಿಲ್ಲ. ನೀವೂ ಹಠ ಸಾಧಿಸಿ ಏನು ಸಾಧನೆ ಮಾಡುತ್ತೀರಿ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!