Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭೋವಿ ನಿಗಮದ ಅಧ್ಯಕ್ಷರಾಗಿ ಚಿತ್ರದುರ್ಗದ ರಾಮಪ್ಪ ನೇರಲಗುಂಟೆ ಆಯ್ಕೆ

---Advertisement---

ಬೆಂಗಳೂರು: ಈ ಮೊದಲು ಭೋವಿ ನಿಗಮದ ಅಧ್ಯಕ್ಷರಾಗಿದ್ದ ಎಸ್.ರವಿಕುಮಾರ್ ಅವರು ತಮ್ಮ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆ ತಮ್ಮ ಸ್ಥಾನ ಕಳೆದುಕೊಂಡಿದ್ದರು. ರಾಜೀನಾಮೆಯನ್ನು ನೀಡಿದ್ದರು. ಇದೀಗ ಆ ಸ್ಥಾನಕ್ಕೆ ಅಧ್ಯಕ್ಷರನ್ನ ನೇಮಕ ಮಾಡಲಾಗಿದೆ. ಚಿತ್ರದುರ್ಗದ

ರಾಮಪ್ಪ ಎಂ. ನೇರಲಗುಂಟೆ ಅವರನ್ನು ಭೋವಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಸರ್ಕಾರ ಆದೇಶ ಹೊರಡಿಸಿದೆ.

ಈ ಆದೇಶ ಹೊರಡಿಸುವುದಕ್ಕೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದು, ಕರ್ನಾಟಕ ಭೋವಿ ನಿಗಮಕ್ಕೆ ಎಂ.ರಾಮಪ್ಪ ನೇರಲಗುಂಟೆ
ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಉಳಿದಂತೆ ಕಾಂಪೋಸ್ಟ್ ಅಭಿವೃದ್ಧಿ ನಿಗಮಕ್ಕೆ ಎ.ಎನ್.ನಟರಾಜ್ ಗೌಡ, ಮೈಸೂರಿನಲ್ಲಿರುವ ಮೃಗಾಲಯ ಪ್ರಾಧಿಕಾರಕ್ಕೆ ಎನ್.ರಂಗಸ್ವಾಮಿ, ಹುಬ್ಬಳ್ಳಿಯಲ್ಲಿರುವ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ಬಿ.ನಾಗೇಂದ್ರ ಕುಮಾರ್ ಅವರನ್ನು ನೇಮಿಸಿದ್ದು, ಸರ್ಕಾರ ಆದೇಶ ಹೊರಡಿಸಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರಕಾರ ಎರಡೂವರೆ ವರ್ಷಗಳ ಅಧಿಕಾರಾವಧಿ ತುಂಬುತ್ತಿರುವ ಬೆನ್ನಲ್ಲೇ ರಾಜ್ಯದ ಒಟ್ಟು 39 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಹಲವು ಸರ್ಕಸ್‌ಗಳ ನಡುವೆ ಅಧ್ಯಕ್ಷರ ನೇಮಕ ಮಾಡಿ ಈಗಾಗಲೇ ಆದೇಶಿಸಿದೆ. ಒಟ್ಟು 39 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷ ಸ್ಥಾನಕ್ಕೆ ಎಐಸಿಸಿ ಅಂತಿಮಗೊಳಿಸಿದ್ದ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೊದಲು ಐದು ಸ್ಥಾನಗಳನ್ನು ಕೈಬಿಟ್ಟು 34 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷ ಸ್ಥಾನವನ್ನು ಫೈನಲ್‌ ಮಾಡಿದ್ದರು. ಇದೀಗ ಮತ್ತೆ ಮೂರು ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಿಸಿ, ಸರ್ಕಾರ ಆದೇಶ ಹೊರಡಿಸಿದೆ. ಭೋವಿ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎಂ. ರಾಮಪ್ಪ ನೇರಲಗುಂಟೆ ಅವರು ನೇಮಕವಾಗುದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...