Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆ ಶಿವಕುಮಾರ್ ಅವರನ್ನು ನಾನು ಸುಮ್ಮನೆ ಬಿಡುವುದಿಲ್ಲ : ನೇರಾ ನೇರ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ

Facebook
Twitter
Telegram
WhatsApp

ಬೆಳಗಾವಿ: ಅಧಿವೇಶನಕ್ಕೆ ಆಗಮಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೇರಾ ನೇರ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾತಣಕ್ಕೂ ಡಿಕೆ ಶಿವಕುಮಾರ್ ಪ್ರಕರಣವನ್ನು ನಾನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಚಳಿಗಾಲದ ಅಧಿವೇಶನಕ್ಕೆ ಬಂದ ರಮೇಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಅವರ ಸಿಬಿಐ ಪ್ರಕರಣವನ್ನು ನಾನು ಸುಮ್ಮನೆ ಬಿಡುವುದಿಲ್ಲ. ಡಿಕೆ ಶಿವಕುಮಾರ್ ಅವರ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಇಷ್ಟು ದಿನ ಸಿದ್ದರಾಮಯ್ಯ ಒಳ್ಳೆಯ ಸಿಎಂ ಆಗಿದ್ದರು. ಆದರೆ ಡಿಕೆ ಶಿವಕುಮಾರ್ ಅವರ ಪ್ರಕರಣವನ್ನು ಕೈಬಿಡುವ ನಿರ್ಣಯವನ್ನು ತೆಗೆದುಕೊಂಡು ಅವರ ಗೌರವಕ್ಕೆ ಅವರೇ ಧಕ್ಕೆ ತಂದುಕೊಂಡಿದ್ದಾರೆ. ಇದು ನಿಜಕ್ಕೂ ಆಘಾತಕಾರಿ ವಿಚಾರವಾಗಿದೆ ಎಂದು ಸಿಬಿಐ ಪ್ರಕರಣ ವಾಪಾಸ್ ಪಡೆದ ಸಂಬಂಧ ಅಸಮಾಧಾನ ಹೊರ ಹಾಕಿದ್ದಾರೆ.

ಈ ಸಂಬಂಧ ನಾನು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ. ಡಿಕೆಶಿ ಸಿಬಿಐ ಪ್ರಕರಣ ವಾಪಾಸ್ ಪಡೆದ ನಿರ್ಧಾರದ ಬಗ್ಗೆ ಸದನದಲ್ಲಿ ತನಿಖೆಯಾಗಬೇಕು. ಬಿಜೆಪಿ ಹೈಕಮಾಂಡ್ ಇಷ್ಟು ದಿನ ಪಂಚರಾಜ್ಯ ಚುನಾವಣೆಗಳಲ್ಲಿ ಬ್ಯುಸಿಯಾಗಿದ್ದರು. ಆದಷ್ಡು ಬೇಗ ಹೈಕಮಾಂಡ್ ಭೇಟಿಯಾಗಿ, ವಿಚಾರ ತಿಳಿಸುತ್ತೇನೆ. ಡಿಕೆಶಿ ಸಿಬಿಐ ಪ್ರಕರಣದ ಬಗ್ಗೆ ಚರ್ಚೆ ಮಾಡುತ್ತೇನೆ. ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಈ ಪ್ರಕರಣವನ್ನು ಸುಮ್ಮನೆ ಬಿಡವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ನಿಖಿಲ್ ಫಸ್ಟ್ ರಿಯಾಕ್ಷನ್ : ಅಜ್ಜ, ಅಜ್ಜಿ ಬಗ್ಗೆ ಮನವಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಸುದ್ದಿ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶದಾದ್ಯಂತೆ ಸದ್ದು ಮಾಡುತ್ತಿದೆ. ನಟಿ ಮಣಿಯರು ಕೂಡ ಇದಕ್ಕೆ ಆಕ್ರೋಶಿತರಾಗಿ ಮಾತನಾಡುತ್ತಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮೊ

ಧಾರಾಕಾರ ಮಳೆಗೆ ಕೋಲಾರದಲ್ಲಿ ಎರಡೂವರೆ ಎಕರೆ ಬಾಳೆ ನಾಶ..!

ಕೋಲಾರ: ಮಳೆಯನ್ನು ಕಂಡು ರೈತ ಅದೆಷ್ಟೋ ವರ್ಷಗಳು ಆಗಿತ್ತೇನೋ ಎಂಬ ಭಾವನೆ ಈ ಬಾರಿಯ ಬಿಸಿಲು ನೋಡಿ ಮೂಡಿತ್ತು. ಆದರೆ ವರುಣರಾಯ ಕೃಪೆ ಏನೋ ತೋರಿದ್ದಾನೆ. ನಿನ್ನೆಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ಮುಂದೆ ಉತ್ತಮ ಮಳೆಯಾಗುವ

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

error: Content is protected !!