Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೆಟ್ಟ ಹುಳು ಎಂದ ರಮೇಶ್ ಜಾರಕಿಹೊಳಿ ಫೋಟೋ ರಿಲೀಸ್..!

---Advertisement---

ಬೆಳಗಾವಿ: ಚುನಾವಣೆ ಹತ್ತಿರ ಸಂಭವಿಸುತ್ತಿದ್ದಂತೆ ರಾಜಕಾರಣಿಗಳು ಅಲರ್ಟ್ ಆಗಿದ್ದಾರೆ. ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದು, ಜನರ ಬಳಿ ಸಂಚಾರ ಆರಂಭಿಸಿದ್ದಾರೆ. ಜೊತೆಗೆ ಜನರಿಗೆ ಹಲವು ಭರವಸೆಗಳನ್ನು ನೀಡುತ್ತಿದ್ದಾರೆ. ಹಾಗೆಯೇ ಎದುರಾಳಿಯ ವಿರುದ್ಧ ವಾಗ್ದಾಳಿಯನ್ನು ಮಾಡುತ್ತಿದ್ದಾರೆ. ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಹಣ ಹಂಚಿಕೆ ವಿಚಾರದಲ್ಲಿ ವಾಕ್ಸಮರ ನಡೆದಿದೆ.

ಉತ್ತಿಚೆಗೆ ರಮೇಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕೆಟ್ಟ ಹುಳು. ಆರು ಸಾವಿರ ಹಣ ಕೊಟ್ರೆ ಮಾತ್ರ ವೋಟು ಹಾಕಿ. ಅವರು ಖರ್ಚು ಮಾಡುವುದಕ್ಕಿಂತ ಹತ್ತು ಕೋಟಿ ಹೆಚ್ಚು ಖರ್ಚು ಮಾಡುತ್ತೀನಿ ಎಂದಿದ್ದರು. ಬೆಳಗಾವಿಯಲ್ಲೆಲ್ಲಾ ಈಗ ಆಡಿಯೋದೆ ಸದ್ದು, ಸುದ್ದಿ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಕ್ಷ್ಮೀ ಹೆಬ್ಬಾಳ್ಕರ್, ಗೆಲ್ಲುವುದಕ್ಜೆ ನಾನು ಚುನಾವಣೆಗೆ ನಿಲ್ಲುತ್ತೇನೆ. ಸೋಲಿಸುವುದಕ್ಕೆ ಪ್ರಯತ್ನ ಮಾಡುವವರು ಸೋಲಿಸುವುಕ್ಕೆ ಪ್ರಯತ್ನ ಮಾಡುತ್ತಾರೆ. ಕಾಲಾಯ ತಸ್ಮೈ ನಮಃ ಅಂತಾರೆ. ನೊಡೋಣಾ. ಅವರು ಈ ಮುಂಚೆಯಿಂದಾನು ಹೆಣ್ಣು ಮಗಳಿಗೆ ಅಗೌರವ ಸೂಚಿಸುತ್ತಾನೆ ಬಂದಿದ್ದಾರೆ.

ನಾನು ಇಡೀ ಬಿಜೆಪಿಯನ್ನು ಬೈಯ್ಯುವುದಕ್ಕೆ ಹೋಗುವುದಿಲ್ಲ. ಆರು ಸಾವಿರ ದುಡ್ಡು ಕೊಟ್ಟರೆ ವೋಟ್ ಹಾಕಿ ಅನ್ನೋದು ಮೂರ್ಖತನ. ನನ್ನ ಕ್ಷೇತ್ರದ ಮತದಾರರು ಬಹಳ ಸ್ವಾಭಿಮಾನಿಗಳು. ಅವರಿಗೆ ಯಾರು..? ಏನು ಅನ್ನೋದು ಅರ್ಥವಾಗುತ್ತೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...