Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಮೇಶ್ ಜಾರಕಿಹೊಳಿ ಹೇಳಿದಂತೆ ಸತೀಶ್ ಜಾರಕಿಹೊಳಿಗೆ ಬೇಸರವಾಗಿದೆಯಾ ..? ಏನಂದ್ರು ಸಚಿವರು..?

---Advertisement---

 

ಬೆಳಗಾವಿ ರಾಜಕಾರಣದಲ್ಲಿ ಇತ್ತಿಚೆಗೆ‌ ಕೊಂಚ ಏರುಪೇರಾಗಿತ್ತು. ಸತೀಶ್ ಜಾರಕಿಹೊಳಿ ಶಾಸಕರೊಂದಿಗೆ ಪ್ರವಾಸ ಹೊರಟಿದ್ದರು. ಆದರೆ ಅದು ಆಮೇಲೆ‌ ನಿಂತಿತ್ತು. ಈ ಮುನಿಸಿನ ಬಗ್ಗೆ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿಯೇ ಸತೀಶ್ ಜಾರಕಿಹೊಳಿ ಕಿರುಕುಳ ಅನುಭವಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಆ ಮಾತಿಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಸಹೋದರ ಮಾಡಿರುವ ಆರೋಪವನ್ನು ಸತೀಶ್ ಜಾರಕಿಹೊಳಿ ತಳ್ಳಿ ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ನನಗೆ ಯಾವುದೇ ಹಿಂಸೆ ಆಗಿಲ್ಲ. ನನಗೆ ಯಾವುದೇ ತೊಂದರೆ ಆಗಿಲ್ಲ. ಇದುವರೆಗೂ ಯಾವುದೇ ಕಿರುಕುಳ ಆಗಿಲ್ಲ. ನಮ್ಮದು ಯಾವ ಬಂಡಾಯವೂ ಇಲ್ಲ ಎಂದಿದ್ದಾರೆ. ಸತೀಶ್ ಜಾರಕಿಹೊಳಿ ಬಂಡಾಯವೆದ್ದಿದ್ದ ಕಾರಣ, ಡಿಸಿಎಂ ಡಿಕೆ ಶಿವಕುಮಾರ್, ಯಾರು ನೇರವಾಗಿ ಪಕ್ಷದ ಮಾತನಾಡುವಂತೆ ಇಲ್ಲ ಎಂಬ ಸೂಚನೆ ನೀಡಿದ್ದರು. ಆ ಬಳಿಕ ಸತೀಶ್ ಜಾರಕಿಹೊಳಿಯೂ ಸುಮ್ಮನೆ ಆಗಿದ್ದರು.

ಇನ್ನು ಇದೇ ವೇಳೆ ಕಾರ್ಣಿಕದ ಬಗ್ಗೆ ಮಾತನಾಡಿದ್ದಾರೆ, ನಾನು ಅದನ್ನು ನಂಬಲ್ಲ. ಇದು ಹಳೆಯದ್ದು ಇರಬೇಕು. ಹೊಸ ವಿಚಾರ ಅಲ್ಲ ಎನಿಸುತ್ತದೆ ಎಂದಿದ್ದಾರೆ. ಹೆಣ್ಣಿನ ಕಂಟಕದಿಂದ ಸರ್ಕಾರಕ್ಕೆ ಕಂಟಕ ಎಂದು ಮೈಲಾರ ಕಾರ್ಣೀಕ ನುಡಿದಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment