Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿನ್ನೆಯ ಶಾಸಕಾಂಗ ಸಭೆಗೆ ರಮೇಶ್ ಜಾರಕಿಹೊಳಿ ಗೈರು : ಬಿಎಸ್ವೈಗೆ ರಾಜ್ಯಾಧ್ಯಕ್ಷ ಕೊಟ್ಟಿದ್ದರು ಬೇಸರ ಇರಲಿಲ್ಲ.. ಆದರೆ..!

Facebook
Twitter
Telegram
WhatsApp

ಬೆಂಗಳೂರು: ನಿನ್ನೆ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅದುವೆ ವಿಪಕ್ಷ ನಾಯಕನ ಆಯ್ಕೆ. ಕಳೆದ ಆರು ತಿಂಗಳಿನಿಂದ ವಿಪಕ್ಷ ನಾಯಕನ ಹುದ್ದೆ ಹಾಗೂ ರಾಜ್ಯಾಧ್ಯಕ್ಷ ಹುದ್ದೆ ಖಾಲಿ ಇತ್ತು. ಲೋಕಸಭಾ ಚುನಾವಣೆಗೂ ಮುನ್ನ ಎರಡು ಹುದ್ದೆಗಳು ತುಂಬಿವೆ. ನಿನ್ನೆ ಶಾಸಕಾಂಗ ಸಭೆ ನಡೆದಿದ್ದು, ಕೇಂದ್ರದಿಂದ ಬಂದಿದ್ದ ವೀಕ್ಷಕರ ಎದುರು ಆರ್ ಅಶೋಕ್ ಹೆಸರು ಫೈನಲ್ ಆಗಿದೆ. ನೂತನವಾಗಿ ವಿಪಕ್ಷ ನಾಯಕರಾಗಿದ್ದಾರೆ.

ಆದರೆ ನಿನ್ನೆ ನಡೆದ ಶಾಸಕಾಂಗ ಸಭೆಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಇಬ್ಬರು ಹೊರ ನಡೆದಿದ್ದರು. ಒಂದೇ ಕಾರಿನಲ್ಲಿ ವಾಪಾಸ್ ಆಗಿದ್ದರು. ವಿಪಕ್ಷ ನಾಯಕನ ಹುದ್ದೆಗೆ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಆಕಾಂಕ್ಷಿಯಾಗಿದ್ದರು. ಆದರೆ ಆ ಹುದ್ದೆ ಕೈತಪ್ಪಿದ ಕಾರಣಕ್ಕೆ ವಾಪಾಸ್ ಆಗಿದ್ದರು. ಇದೀಗ ರಮೇಶ್ ಜಾರಕಿಹೊಳಿ ಅವರು ವಾಪಾಸ್ ಆದ ಕಾರಣ ಈಗ ಹೊರಬಿದ್ದಿದೆ.

ಕೇಂದ್ರದಿಂದ ಆಗಮಿಸಿದ್ದಂತ ವೀಕ್ಷಕರ ಎದುರು ರಮೇಶ್ ಜಾರಕಿಹೊಳಿ ಅವರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಅದುವೆ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ. ನಮಗಿಂತ ಕಿರಿಯ‌ ವಯಸ್ಸಿನ ವಿಜಯೇಂದ್ರ ಕೆಳಗೆ ನಾವು ಕೆಲಸ ಮಾಡೋದು ಹೇಗೆ?. ಬಿಎಸ್​ವೈಗೆ ರಾಜಾಧ್ಯಕ್ಷ ಸ್ಥಾನ ನೀಡಿದ್ದರೇ ಒಪ್ಪಿಕೊಳ್ಳುತ್ತಿದ್ದೇವು. ಆ ಸ್ಥಾನಕ್ಕೆ ಪಕ್ಷದಲ್ಲಿನ ಇತರೆ ಹಿರಿಯರನ್ನ ಪರಿಗಣಿಸಬೇಕಿತ್ತು. ನಮಗಿಂತ ಕಿರಿಯರ ಮುಂದೆ ನಾವು ಕೆಲಸ ಮಾಡುವುದು ಹೇಗೆ ಎಂದು ಸಾಹುಕಾರ ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

error: Content is protected !!