Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಡಿಯನ್ನಿಟ್ಟುಕೊಂಡೆ ಡಿಕೆಶಿ ಟಾರ್ಗೆಟ್ ಮಾಡಿದ ರಮೇಶ್ ಜಾರಕಿಹೊಳಿ ದೆಹಲಿಗೆ ಪಯಣ..!

Facebook
Twitter
Telegram
WhatsApp

ಬೆಳಗಾವಿ: ಸಿಡಿ ಕೇಸ್ ನಿಂದಾಗಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದರು. ಬಳಿಕ ಕೇಸ್ ನಿಂದ ಕ್ಲೀನ್ ಚಿಟ್ ಕೊಟ್ಟ ಬಳಿಕ ಮೊದಲು ಸಚಿವ ಸ್ಥಾನ ಮರಳಿ ಪಡೆಯಲು ಸಾಕಷ್ಟು ಶ್ರಮ ಪಟ್ಟರು. ಆದರೆ ಅದು ಕೂಡ ಸಾಧ್ಯವಾಗಿಲ್ಲ. ಇದೀಗ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅದೇ ಸಿಡಿ ಕೇಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ರಮೇಶ್ ಜಾರಕಿಹೊಳಿ ಟಾರ್ಗೆಟ್ ಮಾಡಿದ್ದಾರೆ.

ಇತ್ತಿಚೆಗೆ ಸುದ್ದಿಗೋಷ್ಟಿಯನ್ನು ನಡೆಸಿದ್ದ ರಮೇಶ್ ಜಾರಕಿಹೊಳಿ, ನಾನು ಸುಮ್ಮನೆ ಕೂತಿರಲಿಲ್ಲ. ಅವರು ಸಮಯ ನೋಡಿ ಹೊಡೆದಂತೆ ನಾನು ಸಮಯಕ್ಕಾಗಿ ಕಾಯುತ್ತಿದ್ದೆ ಎಂದಿದ್ದಾರೆ. ಇದೇ ವೇಳೆ ಸಿಡಿ ಕೇಸನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದ್ದರು. ಇದೀಗ ಮತ್ತೆ ಅದೇ ಪ್ರಯತ್ನ ಮಾಡುತ್ತಿದ್ದಾರೆ.

ಭಾನುವಾರ ಸಿಎಂ ಬೊಮ್ಮಾಯಿ ಅವರು ದೆಹಲಿಗೆ ಹೊರಡಲಿದ್ದಾರೆ. ಈ ಮೂಲಕ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಹೇಗಾದರೂ ಮಾಡಿ ಸಿಡಿ ಕೇಸನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಲಿದ್ದಾರೆ. ರಮೇಶ್ ಜಾರಕಿಹೊಳಿ ಕೂಡ ಸಿಎಂ ಜೊತೆಗೆ ದೆಹಲಿಗೆ ತೆರಳಿದ್ದಾರೆ. ಈ ಮೂಲಕ ಸಿಡೊ ಕೇಸನ್ನು ಮುಂದುವರೆಸಲು ಪಣ ತೊಟ್ಟಿದ್ದಾರೆ.

 

ಇನ್ನು ಕೆಲವೇ ದಿನಗಳಲ್ಲಿ ಚುನಾವಣೆ ಘೋಷಣೆಯಾಗುತ್ತದೆ. ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಾ ನೇರ ಸ್ಪರ್ಧೆ ಇದೆ. ಹೀಗಾಗಿ ಕಾಂಗ್ರೆಸ್ ಈ ಬಾರಿ ಅಧಿಕಾರ ಹಿಡಿಯಲು ಸತತ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಚುನಾವಣೆಯಲ್ಲಿ ಸೋಲಿಸುವುದಕ್ಕೆ ಸಿಬಿಐಗೆ ವಹಿಸುವುದು ಕೂಡ ಮುಖ್ಯ ಎನ್ನಲಾಗುತ್ತಿದೆ. ಡಿಕೆಶಿಯನ್ನು ಟಾರ್ಗೆಟ್ ಮಾಡಲೆಂದೆ ರಮೇಶ್ ಜಾರಕಿಹೊಳಿ ನಿರ್ಧರಿಸಿದ್ದಾರೆ. ಡಿಕೆ ಶಿವಕುಮಾರ್ ರಾಜಕೀಯ ಅಂತ್ಯ ನನ್ನಿಂದಾನೆ ಎಂದು ರಮೇಶ್ ಜಾರಕಿಹೊಳಿ ಗುಡುಗಿದ್ದರು. ಅದಕ್ಕಾಗಿಯೇ ಈ ದಾರಿ ಹಿಡಿದಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!