Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಯಾರೇ ಕಾಂಗ್ರೆಸ್ ಗೆ ವಾಪಾಸಾದರೂ ರಮೇಶ್ ಜಾರಕಿಹೊಳಿ ಮಾತ್ರ ಆಗಲ್ಲ : ಅದಕ್ಕೆ ಕಾರಣ ಇಲ್ಲಿದೆ..!

---Advertisement---

 

ಬೆಳಗಾವಿ : ಸದ್ಯ ರಾಜ್ಯ ರಾಜಕಾರಣದಲ್ಲಿ ಘರ್ ವಾಪಾಸಿ ಎಂಬುದು ಜೋರು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದವರು ಮತ್ತೆ ಮರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ ಸರ್ಕಾರ ಕೆಡವಿ ಬಿಜೆಪಿ ಸೇರಿದ್ದರು. ಆ ಟೀಮ.ಗೆ ಬಾಂಬೆ ಟೀಂ ಅಂತಾನು ಕರೆಯಲಾಗಿತ್ತು. ಆ ಟೀಂನಲ್ಲಿ ರಮೇಶ್ ಜಾರಕಿಹೊಳಿ ಕೂಡ ಪ್ರಮುಖ ಪಾತ್ರ ವಹಿಸಿದ್ದವರು.

ಇದೀಗ ಒಂದಷ್ಟು ಶಾಸಕರು ವಾಪಾಸಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆ ರಮೇಶ್ ಜಾರಕಿಹೊಳಿ ಏನು ಮಾಡ್ತಾರೆ ಎಂಬ ಚರ್ಚೆಗಳು ಶುರುವಾಗಿದೆ. ಒಂದು ಮಾಹಿತಿಯ ಪ್ರಕಾರ ಯಾರೇ ವಾಪಾಸ್ ಕಾಂಗ್ರೆಸ್ ಗೆ ಹೋದರೂ ಕೂಡ ರಮೇಶ್ ಜಾರಕಿಹೊಳಿ ಮಾತ್ರ ವಾಪಾಸ್ ಹೋಗೋದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.

ಅದರ ಬದಲು ಬಿಜೆಪಿಯಲ್ಲಿ ಇದ್ದುಕೊಂಡೆ, ಪಕ್ಷ ಸಂಘಟನೆ ಮಾಡಿದರೆ, ಇಲ್ಲಿಯೇ ಒಳ್ಳೆಯ ಅಧಿಕಾರ ತಮ್ಮದಾಗುತ್ತದೆ ಎಂಬ ಅಭಿಪ್ರಾಯ ಹೊಂದಿದ್ದಾರೆ. ಅದಕ್ಕಾಗಿಯೇ ಬಿಜೆಪಿ ಪಕ್ಷದ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿ, ಮುಕ್ತವಾಗಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಅದುವೆ ಪಕ್ಷ ಸಂಘಟನೆಯ ಬಗ್ಗೆ.

ಇನ್ನು ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಪಕ್ಷ ಸಂಘಟನೆ ಹಾಗೂ ಪಕ್ಷದ ಗೆಲುವುಗಾಗಿ ದುಡಿಯಲು ಹೊರಟಿದ್ದಾರೆ ರಮೇಶ್ ಜಾರಕಿಹೊಳಿ. ಜೊತೆಗೆ ಬಿಜೆಪಿಯಲ್ಲಿಯೇ ಇರುವುದಕ್ಕೆ ಹಲವು ಕಾತಣಗಳು ಇದೆ. ಕಾಂಗ್ರೆಸ್ ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಡಿಕೆ ಶಿವಕುಮಾರ್ ಪ್ರಾಬಲ್ಯವನ್ನು ಸಹಿಸಿಕೊಳ್ಳಬೇಕಾಗುತ್ತದೆ. ಈಗಂತು ಬೆಳಗಾವಿಯಲ್ಲಿ ನಾನಾ ನೀನಾ ಎಂಬಂತಿದ್ದಾರೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ. ಬಿಟ್ಟು ಬಂದ ಪಕ್ಷವನ್ನೇ ಮತ್ತೆ ಸೇರಿದರೆ ಗೌರವ ಇರಲ್ಲ ಅನ್ನೋದು ರಮೇಶ್ ಜಾರಕಿಹೊಳಿ ಅವರ ಅಭಿಪ್ರಾಯವಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment