ಬೆಂಗಳೂರು; ರಮೇಶ್ ಜಾರಕಿಹೊಳಿ ಅವರ ನಡೆ ಕಾಂಗ್ರೆಸ್ ಸೇರುತ್ತಾರಾ ಎಂಬ ಅನುಮಾನವನ್ನು ಹುಟ್ಟು ಹಾಕಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿಯೇ ಇದ್ದವರು ರಮೇಶ್ ಜಾರಕಿಹೊಳಿ. ಇದೀಗ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಹೀಗಾಗಿ ರೆಬೆಲ್ ಆದವರೆಲ್ಲ ಕೊಂಚ ಸೈಲೆಂಟ್ ಆಗಿದ್ದಾರೆ. ಆದರೆ ಆ ಸೈಲೆಂಟ್ ಬೂದಿ ಮುಚ್ಚಿದ ಕೆಂಡದಂತೆಯೇ ಸರಿ. ಇದೀಗ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿರೋದು ಚರ್ಚೆಗೆ ಗ್ರಾಸವಾಗಿದೆ.
ನಿನ್ನೆ ಸಿದ್ದರಾಮಯ್ಯ ಹಾಗೂ ರಮೇಶ್ ಜಾರಕಿಹೊಳಿ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ಮುಖಾಮುಖಿಯಾಗಿದ್ದಾರೆ. ಅಲ್ಲಿಯೇ ಇದ್ದ ಕೆಲ ನಾಯಕರು ಸೇರಿದಂತೆ ರಮೇಶ್ ಜಾರಕಿಹೊಳಿ ಅವರು ಕೂಡ ಕುಶಲೋಪರಿ ವಿಚಾರಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಪ್ರಸ್ತಾಪವೂ ನಡೆದಿದೆ. ಅಲ್ಲಿಯೇ ಇದ್ದ ಜಮೀರ್ ಅಹ್ಮದ್ ಖಾನ್, ಸಾಹುಕಾರ ಎಂದು ಅಪ್ಪಿ ಮಾತನಾಡಿಸಿದ್ದಾರೆ.
ಮತ್ತೊಂದು ಕಡೆ ಮಾಜಿ ಶಾಸಕ ಫಿರೋಜ್ ಶೇಠ್ ಅವರು, ರಮೇಶ್ ನ ಕಾಂಗ್ರೆಸ್ ಗೆ ವಾಪಾಸ್ ಕರೆಸಿಕೊಳ್ಳಿ ಎಂದೇ ಹೇಳಿದ್ದಾರೆ. ಆಗ ಸಿಎಂ ಏನು ಮಾತಾಡದೆ ರಮೇಶ್ ಜಾರಕಿಹೊಳಿಯತ್ತ ನೋಡಿ ಕಣ್ಸನ್ನೆ ಮಾಡಿ, ಸುಮ್ಮನಾಗಿರುವ ದೃಶ್ಯ ಕಂಡು ಬಂದಿದೆ. ಬಳಿಕ ಆ ಕಾರ್ಯಕ್ರಮ ಮುಗಿಸಿಕೊಂಡು ಎಲ್ಲರೂ ಹೊರಟಿದ್ದಾರೆ. ಸದ್ಯ ಬಿಜೆಪಿಯಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಹಲವರ ಅಸಮಾಧಾನವಿದೆ. ಅದರಲ್ಲೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೊತೆಗಿದ್ದವರೆಲ್ಲಾ ಈಗ ಸೈಲೆಂಟ್ ಆಗಿದ್ದಾರೆ. ಯತ್ನಾಳ್ ಮಾತ್ರ ಹೊರಗಿದ್ದರು ವೈಲೆಂಟ್ ಆಗಿಯೇ ಇದ್ದಾರೆ. ಪದೇ ಪದೇ ಯಡಿಯೂರಪ್ಪ ಫ್ಯಾಮಿಲಿ ಮೇಲೆ ಗರಂ ಆಗ್ತಾನೆ ಇರ್ತಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











