ರಮೇಶ್ ಜಾರಕಿಹೊಳಿ ಸಿಡಿ ಕೇಸ್ ; ವಿಜಯೇಂದ್ರ – ಡಿಕೆಶಿ ಬುಡಕ್ಕೆ ಯತ್ನಾಳ್ ಬಾಂಬ್..!

ಬೆಂಗಳೂರು; ಶಾಸಕ ಬಸನಗೌಡ ಪಾಟೀಲ್ ಅವರು ಫೈಯರ್ ಬ್ರಾಂಡ್ ಅಂತಾನೇ ಹೆಸರು ಪಡೆದಿರುವವರು. ಬಿಜೆಪಿಯಲ್ಲಿಯೇ ಇದ್ದುಕೊಂಡು ಬಿಜೆಪಿ ನಾಯಕರ ವಿರುದ್ಧವೇ ಧ್ವನಿ ಏರಿಸುತ್ತಿದ್ದವರು. ಅದರಲ್ಲೂ ಮಾಜಿ ಸಿಎಂ, ಬಿಜೆಪಿಯ ರಾಜ್ಯಾಧ್ಯಕ್ಷರ ಮೇಲೆ ಕೆಂಡಕಾರುತ್ತಿದ್ದರು. ಹೀಗಾಗಿ ಬಿಜೆಪಿಯ ಶಿಸ್ತು ಸಮಿತಿ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ‌. ಇದೀಗ ಸಿಡಿ ಕೇಸ್ ವಿಚಾರದಲ್ಲಿ ವಿಜಯೇಂದ್ರ ಹಾಗೂ ಡಿಕೆ ಶಿವಕುಮಾರ್ ಹೆಸರೇಳುವ ಮೂಲಕ ಯತ್ನಾಳ್ ಸ್ಪೋಟಕ ವಿಚಾರವನ್ನ ಬಾಯ್ಬಿಟ್ಟಿದ್ದಾರೆ.

ಈ ಬಗ್ಗೆ ಮಾಧ್ಯಮದವರ ಜೊತೆಗೆ ಮಾತನಾಡಿದ ಯತ್ನಾಳ್, ದೆಹಲಿಯಲ್ಲಿರುವ ಸಂಸದರೇ ವಿಜಯೇಂದ್ರ ವಿರುದ್ಧ ಇದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ತೆಗೆಯಬೇಕು ಅಂತಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಸಿಡಿಯನ್ನು ಮಾಡಿಸಿದ್ದೇ ವಿಜಯೇಂದ್ರ ಹಾಗೂ ಡಿಕೆ ಶಿವಕುಮಾರ್ ಅವರೇ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಈ ಹಿಂದೆ ಶಿವಕುಮಾರ್ ಅವರ ಜೊತೆಗೆ ಸೇರಿಕೊಂಡು ವಿಜಯೇಂದ್ರ ಅವರೇ ರಮೇಶ್ ಜಾರಕಿಹೊಳಿ ಸಿಡಿ ಮಾಡಿಸಿದ್ದರು. ಈಗ ಇದೇ ಟೀಂ ಬಯಲಿಗೆ ಬಂದಿರುವ ಹನಿಟ್ರ್ಯಾಪ್ ಹಿಂದೆಯೂ ಇದೆ. ಬಿಜೆಪಿಯಿಂದ ಉಚ್ಛಾಟನೆಯಾದ ಬಳಿಕ ಮನೆಯಲ್ಲಿ ಸುಮ್ಮನೆ ಕೂರುವುದಿಲ್ಲ. ನಾನು ಯಾವತ್ತಿಗೂ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ. ಬಿಜೆಪಿಯವರು ಗೌರವದಿಂದ ವಾಪಾಸ್ ಕರೆದರೆ ಮತ್ತೆ ಹೋಗುತ್ತೇನೆ. ಬೀದರ್ ನಿಂದ ಚಾಮರಾಜನಗರ, ಕೋಲಾರದಿಂದ ಕೊಡಗಿನವರೆಗೂ ರಾಜ್ಯ ಪ್ರವಾಸ ಮಾಡುತ್ತೇನೆ. ಇವರ ವಿರುದ್ಧ ಎಂದಿಗೂ ಹೋರಾಟ ನಿಲ್ಲಿಸುವುದಿಲ್ಲ. ಹಿಂದೂಗಳ ರಕ್ಷಣೆಗಾಗಿ ರಾಜ್ಯ ಪ್ರವಾಸ ಮಾಡುತ್ತೇನೆ. ಅಪ್ಪ – ಮಕ್ಕಳ ಕುಟುಂಬವನ್ನು ರಾಜಕೀಯದಿಂದ ದೂರ ಮಾಡುತ್ತೇನೆ ಎಂದು ಶಪಥ ಮಾಡಿದ್ದಾರೆ.

suddionenews

Recent Posts

ಘಿಬ್ಲಿ ಫೋಟೋಗೆ ನೀವೂ ಮಾರು ಹೋಗಿದ್ದೀರಾ..? ಇದು ಎಷ್ಟು ಡೇಂಜರ್ ಗೊತ್ತಾ..? ಸೈಬರ್ Expert ಹೇಳೋದೇನು..?

  ಸೋಷಿಯಲ್ ಮೀಡಿಯಾದಲ್ಲಿ ಆಗಾಗ ಕೆಲವೊಂದು ಟ್ರೆಂಡ್ ಕ್ರಿಯೇಟ್ ಆಗ್ತಾ ಇರುತ್ತವೆ. ಆ ಟ್ರೆಂಡ್ ಬಿರುಗಾಳಿ ಬೀಸಿದಂತೆ ಹಬ್ಬಿ ಬಿಡುತ್ತದೆ.…

9 hours ago

ಚಳ್ಳಕೆರೆ : ಜಮೀನು ವಿಚಾರ ಗಲಾಟೆ : ಇಬ್ಬರ ಮೇಲೆ ಹಲ್ಲೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 02…

10 hours ago

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಚಿತ್ರದುರ್ಗ. ಏ.02: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು "ಶೂನ್ಯ"ಗೊಳಿಸಲು ವಿಶೇಷ ಮುತುವರ್ಜಿಯಿಂದ  ಪೊಲೀಸ್   ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ…

10 hours ago

ಉಚಿತ ಷಟಲ್ ಬ್ಯಾಡ್ಮಿಂಟನ್ ತರಬೇತಿ : ಯಾರಿಗೆಲ್ಲಾ ಈ ಅವಕಾಶ ಇದೆ ? ಇಲ್ಲಿದೆ ಮಾಹಿತಿ…!

ಚಿತ್ರದುರ್ಗ. ಎಪ್ರಿಲ್.02 : ಖೇಲೋ ಇಂಡಿಯಾ ಯೋಜನೆಯಡಿ ಚಿತ್ರದುರ್ಗ ನಗರದ ಬಾಲಕ ಮತ್ತು ಬಾಲಕಿಯರಿಗೆ ಉಚಿತ ಷಟಲ್ ಬ್ಯಾಡ್ಮಿಂಟನ್ ತರಬೇತಿ…

10 hours ago

ಬಳ್ಳಾರಿ ಜನತೆಗೆ ಕರ ಏರಿಕೆ ಬಿಸಿ : ಹೆಚ್ಚಾಯ್ತು ನೀರಿನ ಕರ ಮತ್ತು ಒಳಚರಂಡಿ ಶುಲ್ಕದ ದರ : ಈಗ ಎಷ್ಟಿದೆ ಗೊತ್ತಾ ?

ಬಳ್ಳಾರಿ,ಏ.02 : ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ 03 ವರ್ಷಕ್ಕೊಮ್ಮೆ ನೀರಿನ ಕರ ಹಾಗೂ ಒಳಚರಂಡಿ ಶುಲ್ಕದ ದರಗಳನ್ನು…

10 hours ago

ದರ್ಶನ್ ಜಾಮೀನು ರದ್ದುಕೋರಿ ಅರ್ಜಿ ; ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ಏಳು ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದ ದರ್ಶನ್ ಅಂಡ್ ಗ್ಯಾಂಗ್ ಬಳಿಕ ಜಾಮೀನಿನ…

10 hours ago